Headlines

‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’: ಮೈಲಾರಲಿಂಗನ ಈ ಕಾರ್ಣಿಕದ ಅರ್ಥವೇನು?

‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’: ಮೈಲಾರಲಿಂಗನ ಈ ಕಾರ್ಣಿಕದ ಅರ್ಥವೇನು?

ವಿಜಯನಗರ, (ಫೆಬ್ರವರಿ 01):  ಭರತ್ ಹುಣ್ಣಿಮೆ ನಿಮಿತ್ತ ವಿಜಯನಗರ ಜಿಲ್ಲೆ ಹೂವಿನಹಡಗಲಿ ತಾಲ್ಲೂಕಿನ ಹರಪನಹಳ್ಳಿy ದೊಡ್ಡ ಮೈಲಾರ ಮೈಲಾರ ಲಿಂಗೇಶ್ವರನ ಈ ವರ್ಷದ ಕಾರ್ಣಿಕ ಹೊರಬಿದ್ದಿದ್ದು, “ಅಂಬಲಿ ರಾಶಿ ಮುದ್ದಿನ ಗಿಣಿ ಸಮೃದ್ಧಿ ಐತಲೆ ಪರಾಕ್’ ಎಂದು ಗೊರವಪ್ಪ ನುಡಿದಿದ್ದಾನೆ. ಭಕ್ತರ ಜಯಘೋಷದ ನಡುವೆ ಬಿಲ್ಲನ್ನೇರಿದ ಗೊರವಯ್ಯ ಶೂನ್ಯವನ್ನು ದಿಟ್ಟಿಸಿ ನೋಡುತ್ತಾ, ಈ ವರ್ಷದ ಕಾರಣಿಕ ನುಡಿದರು. ಈ ವರ್ಷ ಗೊರವಯ್ಯ “ಅಂಬಲಿ ರಾಶಿ ಮುದ್ದಿನ ಗಿಣಿ ಸಮೃದ್ಧಿ ಐತಲೆ ಪರಾಕ್’ ಎಂಬ ಕಾರಣಿಕ ಹೇಳಿದ್ದಾರೆ. ಈ ಕಾರಣಿಕವನ್ನು ಹಲವು ರೀತಿಯಲ್ಲಿ ವಿಶ್ಲೇಷಿಸಲಾಗುತ್ತಿದೆ. ಹಲವು ವರ್ಷಗಳಿಂದ ಭರತ ಹುಣ್ಣಿಮೆಯಂದು ಕಾರಣಿಕ ನುಡಿಯುವ ಸಂಪ್ರದಾಯ ಇಲ್ಲಿದೆ. ಇಲ್ಲಿಯ ಕಾರಣಿಕದ ನಂತರ ಮೈಲಾರದಲ್ಲಿ ಕಾರಣಿಕವಾಗುತ್ತದೆ. ‘ಈ ಬಾರಿ ಮಳೆಬೆಳೆಯಾಗಿ ರಾಜ್ಯದ ಜನರು ಸುಖದಿಂದ ಇರುತ್ತಾರೆ’ ಎಂದು ಹಲವಾರು ಜನರು ಕಾರಣಿಕವನ್ನು ವಿವರಿಸಿದ್ದಾರೆ. ಇಲ್ಲಿನ ಕಾರಣಿಕ ಸತ್ಯವಾಗುತ್ತದೆ ಎಂದು ಜನರು ನಂಬುತ್ತಾರೆ.

Source link

Leave a Reply

Your email address will not be published. Required fields are marked *