ಬೀದರ್, ಏಪ್ರಿಲ್ 26: ಅಕ್ರಮವಾಗಿ ಗೋವುಗಳನ್ನು ಸಾಗಾಟ ಮಾಡುತ್ತಿದ್ದ ವಾಹನವನ್ನು ತಡೆದು ಅವುಗಳನ್ನು ಸ್ವತಃ ಶಾಸಕರೇ ರಕ್ಷಣೆ ಮಾಡಿರುವ ಘಟನೆ ಬಸವಕಲ್ಯಾಣ ತಾಲೂಕಿನ ಅಲಗೂಡ ಗ್ರಾಮದ ಸಮೀಪ ನಡೆದಿದೆ. ಬಸವಕಲ್ಯಾಣದಿಂದಾ ಅಲಗೂಡ ಚಿಟ್ಟಾ ಗ್ರಾಮದ ಮೂಲಕ ಮಹಾರಾಷ್ಟ್ರಕ್ಕೆ ಸಾಗಿಸುತ್ತಿದ್ದ ಒಂದೆರಡಲ್ಲ ಬರೋಬ್ಬರಿ 23 ಗೋವುಗಳನ್ನು ಬಿಜೆಪಿ ಶಾಸಕ ಶರಣು ಸಲಗರ ರಕ್ಷಣೆ ಮಾಡಿದ್ದಾರೆ. ಮಂಠಾಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ರಕ್ಷಿಸಿದ ಗೋವುಗಳನ್ನು ಗೋಶಾಲೆಗೆ ರವಾನೆ ಮಾಡಲಾಗಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
