ಬೆಂಗಳೂರು, ಮೇ.3: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗರ್ಭಿಣಿ ಹೆಂಡತಿಯನ್ನೇ ಮನೆಯಿಂದ ಆಚೆ ಹಾಕಿರುವ ಅಮಾನವೀಯ ಘಟನೆ ದಾಸರಹಳ್ಳಿಯ ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಿಎಂಟಿಸಿ ಸೆಕ್ಯೂರಿಟಿ ಇನ್ಚಾರ್ಜ್ ಆಗಿರುವ ಜಗದೀಪ್ (42) ತನ್ನ ಪತ್ನಿ ಶ್ವೇತಾ (32)ಗೆ ದ್ರೋಹ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಶ್ವೇತಾ ಮತ್ತು ಜಗದೀಪ್ 14 ವರ್ಷಗಳ ಹಿಂದೆ ವಿವಾಹವಾಗಿದ್ದರು. ಜಯನಗರದ ಸರ್ಕಾರಿ ಕ್ವಾರ್ಟರ್ಸ್ನಲ್ಲಿ ಇಬ್ಬರೂ ವಾಸವಿದ್ದರು.
ಪತಿ ಜಗದೀಪ್ನ ವರ್ತನೆಯಲ್ಲೂ ತುಂಬಾ ಬದಲಾವಣೆಗಳು ಆಗಿತ್ತು. ಇದರಿಂದ ಅನುಮಾನಗೊಂಡು ವಾಟ್ಸಾಪ್ ಸಂದೇಶಗಳನ್ನು ಪರಿಶೀಲಿಸಿದಾಗ ಆತನಿಗೆ ಬೇರೊಬ್ಬ ಮಹಿಳೆಯೊಂದಿಗೆ ಅಕ್ರಮ ಸಂಬಂಧವಿರುವುದು ಪತ್ನಿ ಶ್ವೇತಾಗೆ ಗೊತ್ತಾಗಿದೆ. ಅಕ್ರಮ ಸಂಬಂಧದ ಬಗ್ಗೆ ಪ್ರಶ್ನಿಸಿದಾಗ ಜಗದೀಪ್ ಪತ್ನಿಯ ಮೇಲೆ ದೈಹಿಕ ಹಲ್ಲೆ ನಡೆಸಿದ್ದಾನೆ. ಅಷ್ಟೇ ಅಲ್ಲದೆ, ಪ್ರಸ್ತುತ ಆರು ತಿಂಗಳ ಗರ್ಭಿಣಿಯಾಗಿರುವ ಶ್ವೇತಾಗೆ “ಮಗು ತೆಗೆಸಿಬಿಡು, ನೀನು ನನಗೆ ಬೇಡ” ಎಂದು ಕಿರುಕುಳ ನೀಡಿದ್ದಾನೆ.
ಇದನ್ನೂ ಓದಿ: ದೇಹದಲ್ಲಿ ಒಂದೇ ಒಂದು ಮಚ್ಚೆ ಇರಬಾರದು, ಬೆತ್ತಲೆ ಪೂಜೆಗೆ 30 ಲಕ್ಷ ರೂ. : ಯುವತಿಗೆ ಕಾಲ್ ಮಾಡಿ ಟಾರ್ಚರ್ ನೀಡುತ್ತಿದ್ದ ಕಿರಣ್
ಕಳೆದ ಆರು ತಿಂಗಳ ಹಿಂದೆ ಗರ್ಭಿಣಿ ಪತ್ನಿಯನ್ನು ಮನೆಯಿಂದ ಹೊರಹಾಕಿರುವ ಜಗದೀಪ್, ಈಗ ಆಕೆಗೆ ಯಾವುದೇ ಆಸರೆ ಇಲ್ಲದಂತೆ ಮಾಡಿದ್ದಾನೆ. ನ್ಯಾಯಕ್ಕಾಗಿ ಆಗ್ರಹಿಸಿ ನೊಂದ ಗರ್ಭಿಣಿ ಶ್ವೇತಾ ಬಾಗಲಗುಂಟೆ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದು, ತನ್ನ ಗಂಡನ ವಿರುದ್ಧ ಕಾನೂನು ಕ್ರಮ ಕೈಗೊಂಡು ತನಗೆ ನ್ಯಾಯ ಕೊಡಿಸುವಂತೆ ಮನವಿ ಮಾಡಿದ್ದಾರೆ.
ವರದಿ: ಮಂಜುನಾಥ್ ಟಿವಿ9 ಕನ್ನಡ
ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On – 1:08 pm, Sun, 3 May 26
