ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನಪ್ರತಿನಿಧಿಗಳ ಸ್ಥಾನಮಾನ ಮತ್ತು ಅಧಿಕಾರಿಗಳ ಕಾರ್ಯವೈಖರಿಯ ನಡುವಿನ ಸಮರ ಹೊಸದೇನಲ್ಲ. ಆದರೆ ಇತ್ತೀಚಿನ ದಿನಗಳಲ್ಲಿ ರಾಜಕೀಯ ವಲಯದಲ್ಲಿ ಕೇಳಿಬರುತ್ತಿರುವ ಒಂದು ಮಾತು ಸಾರ್ವಜನಿಕ ಚರ್ಚೆಗೆ ಗ್ರಾಸವಾಗಿದೆ. “ರಾಜಕೀಯದಲ್ಲಿ ಹೆಬ್ಬೆಟ್ಟು ಮುಖ್ಯಮಂತ್ರಿಯಾಗಬಹುದು, ಆದರೆ ಎಷ್ಟೇ ಓದಿ ಅಧಿಕಾರಿಗಳಾದರೂ ಅವರು ನಮ್ಮ ಕೆಳಗೆ ಕೆಲಸ ಮಾಡಬೇಕು ಎಂದು ತೆಲಂಗಾಣದ ಸಚಿವೆ ಕೊಂಡ ಸುರೇಖಾ ಹೇಳಿದ್ದಾರೆ. ಮುಲುಗಿನ ಅರಣ್ಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯಲ್ಲಿ (FCRI) ನೆನ್ನೆ (ಫೆ. 17) ನಡೆದ ಕಾರ್ಯಕ್ರಮದಲ್ಲಿ ಈ ಹೇಳಿಕೆ ನೀಡಿದ್ದಾರೆ. ಐಎಎಸ್ ಅಥವಾ ಐಪಿಎಸ್ ಅಧಿಕಾರಿಗಳಾಗುವುದು ಅಷ್ಟು ಸುಲಭವಲ್ಲ. ಅದಕ್ಕಾಗಿ ಅತೀವವಾಗಿ ಶ್ರಮಪಡಬೇಕು, ಹಗಲು-ರಾತ್ರಿ ಓದಬೇಕು. ಅಷ್ಟೆಲ್ಲಾ ಕಷ್ಟಪಟ್ಟು ಅಧಿಕಾರಿಗಳಾದ ಮೇಲೂ, ಅಂತಿಮವಾಗಿ ಅವರು ನಮ್ಮ (ರಾಜಕಾರಣಿಗಳ) ನಿರ್ದೇಶನದಂತೆ ನಡೆಯಬೇಕು” ಎಂದು ಹೇಳಿದ್ದಾರೆ.
ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
