ಅಧ್ಯಕ್ಷರಾಗಿ ಮೊದಲ ಬಾರಿಗೆ ಕೆಪಿಸಿಸಿ ಕಚೇರಿಗೆ ಬಿಕೆ ಹರಿಪ್ರಸಾದ್ ಆಗಮನ: ಅದ್ದೂರಿ ಸ್ವಾಗತ, ಜಿಬಿಎ ಚುನಾವಣೆ ಕುರಿತು ಮಹತ್ವದ ಸಭೆ – Kannada News

ಬೆಂಗಳೂರು, ಜೂನ್ 10: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ (KPCC) ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ಬಿಕೆ ಹರಿಪ್ರಸಾದ್ ಬುಧವಾರ ಮೊದಲ ಬಾರಿಗೆ ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಪ್ರಧಾನ ಕಚೇರಿಗೆ ಭೇಟಿ ನೀಡಿದ್ದಾರೆ. ಪಕ್ಷದ ಸಾರಥ್ಯ ವಹಿಸಿಕೊಂಡ ಬಳಿಕ ಮೊದಲ ಬಾರಿ ಕಚೇರಿಗೆ ಆಗಮಿಸಿದ ನೂತನ ಸಾರಥಿಗೆ ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರು ಅತ್ಯಂತ ಅದ್ದೂರಿ ಮತ್ತು ಸಡಗರದ ಸ್ವಾಗತ ಕೋರಿದರು. ಕೆಪಿಸಿಸಿ ಕಾರ್ಯಾಧ್ಯಕ್ಷರು, ಮಾಜಿ ಸಚಿವರು ಹಾಗೂ ಹಿರಿಯ ಎಂಎಲ್‌ಸಿಗಳು ಹೂಗುಚ್ಛ ನೀಡಿ ಹರಿಪ್ರಸಾದ್ ಅವರನ್ನು ಬರಮಾಡಿಕೊಂಡರು. ಇದೇ ವೇಳೆ ಸಚಿವರಾದ ಜಮೀರ್ ಅಹಮದ್ ಖಾನ್ ಕೂಡ ಕೆಪಿಸಿಸಿ ಕಚೇರಿಗೆ ಆಗಮಿಸಿ ನೂತನ ಅಧ್ಯಕ್ಷರಿಗೆ ಶುಭ ಹಾರೈಸಿದರು.

ಕಚೇರಿಗೆ ಭೇಟಿ ನೀಡಿದ ಬೆನ್ನಲ್ಲೇ ಆಡಳಿತಾತ್ಮಕವಾಗಿ ಸಕ್ರಿಯರಾದ ಬಿಕೆ ಹರಿಪ್ರಸಾದ್, ಮೊದಲ ಅಧಿಕೃತ ಸಭೆ ನಡೆಸಿದರು. ಮುಂಬರುವ ಜಿಬಿಎ (GBA) ಚುನಾವಣೆಗಳ ಸಿದ್ಧತೆಗಾಗಿ ಪಕ್ಷದಿಂದ ನಿಯೋಜಿಸಲಾಗಿರುವ ವೀಕ್ಷಕರೊಂದಿಗೆ (Observers) ಅವರು ಸುದೀರ್ಘ ಸಮಾಲೋಚನೆ ನಡೆಸಿದರು. ಈ ಪ್ರಮುಖ ಸಭೆಯಲ್ಲಿ ಸಚಿವ ಜಮೀರ್ ಅಹ್ಮದ್ ಖಾನ್, ಹಿರಿಯ ಮುಖಂಡರಾದ ನಸೀರ್ ಅಹಮದ್, ಸಲೀಂ ಅಹಮದ್, ಜಿ.ಸಿ. ಚಂದ್ರಶೇಖರ್, ಬೇಳೂರು ಗೋಪಾಲಕೃಷ್ಣ ಹಾಗೂ ಐವಾನ್ ಡಿಸೋಜ ಸೇರಿದಂತೆ ಹಲವು ಪ್ರಮುಖ ನಾಯಕರು ಭಾಗವಹಿಸಿ ಮಹತ್ವದ ಚರ್ಚೆ ನಡೆಸಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *