ಅನ್ನಭಾಗ್ಯ ಅಕ್ಕಿ ಜೊತೆ ಸಿಗಲಿದೆ ಉಪ್ಪು, ಸಕ್ಕರೆ, ತೊಗರಿ ಸಮೇತ ಇಂದಿರಾ ಕಿಟ್! ಬಿಪಿಎಲ್ ಕಾರ್ಡುದಾರರಿಗೆ ಬಜೆಟ್ ಗಿಫ್ಟ್

ಅನ್ನಭಾಗ್ಯ ಅಕ್ಕಿ ಜೊತೆ ಸಿಗಲಿದೆ ಉಪ್ಪು, ಸಕ್ಕರೆ, ತೊಗರಿ ಸಮೇತ ಇಂದಿರಾ ಕಿಟ್! ಬಿಪಿಎಲ್ ಕಾರ್ಡುದಾರರಿಗೆ ಬಜೆಟ್ ಗಿಫ್ಟ್

ಬೆಂಗಳೂರು, ಮಾರ್ಚ್ 6: ಕರ್ನಾಟಕ ಸರ್ಕಾರವು 2026ರ ಬಜೆಟ್‌ನಲ್ಲಿ ಬಿಪಿಎಲ್ ಕಾರ್ಡ್​​​ದಾರರಿಗೆ ಮಹತ್ವದ ಯೋಜನೆ ಘೋಷಿಸಿದೆ. ಸರ್ಕಾರದ ಮಹತ್ವಾಕಾಂಕ್ಷೆಯ ಅನ್ನಭಾಗ್ಯ ಯೋಜನೆಯಡಿ ರಾಜ್ಯದ 4.54 ಕೋಟಿ ಬಡ ಫಲಾನುಭವಿಗಳಿಗೆ 5 ಕೆಜಿ ಹೆಚ್ಚುವರಿ ಅಕ್ಕಿಯನ್ನು ಯಶಸ್ವಿಯಾಗಿ ವಿತರಿಸಲಾಗುತ್ತಿತ್ತು. ಕಳೆದ ಮೂರು ವರ್ಷಗಳಲ್ಲಿ ಈ ಯೋಜನೆಗೆ 17,167 ಕೋಟಿ ರೂಪಾಯಿ ವೆಚ್ಚ ಮಾಡಲಾಗಿದೆ. ಈಗ, ಹೆಚ್ಚುವರಿ 5 ಕೆಜಿ ಅಕ್ಕಿಯ ಬದಲಾಗಿ, ಪ್ರತಿ ತಿಂಗಳು ಪೌಷ್ಟಿಕಾಂಶಯುಳ್ಳ ಇಂದಿರಾ ಆಹಾರ ಕಿಟ್ ವಿತರಿಸಲು ಸರ್ಕಾರ ಉದ್ದೇಶಿಸಿದೆ. ಈ ಕಿಟ್‌ನಲ್ಲಿ ತೊಗರಿಬೇಳೆ, ಸಕ್ಕರೆ, ಉಪ್ಪು ಮತ್ತು ಅಡಿಗೆ ಎಣ್ಣೆ ಒಳಗೊಂಡಿರುತ್ತದೆ. 2026-27ನೇ ಸಾಲಿನಲ್ಲಿ ಈ ಯೋಜನೆಗಾಗಿ 6,200 ಕೋಟಿ ರೂಪಾಯಿಗಳನ್ನು ಮೀಸಲಿಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಕರ್ನಾಟಕ ಬಜೆಟ್ ಕುರಿತ ಕ್ಷಣಕ್ಷಣದ ಅಪ್​ಡೇಟ್​ಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *