
ಶಿವಮೊಗ್ಗ, (ಮಾರ್ಚ್ 30): ಪ್ರೀತಿಸಿ (Love) ಕೇವಲ ಆರು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಜೋಡಿ ದುರಂತ ಸಾವು ಕಂಡಿದೆ. ಹೌದು… ಶಿವಮೊಗ್ಗ (Shivamogga) ಜಿಲ್ಲೆಯ ಭದ್ರಾವತಿ ತಾಲೂಕಿನ ಶಂಕರಘಟ್ಟ ಗ್ರಾಮದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ (Road Accident) ನವ ದಂಪತಿ ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ಲಾರಿಗೆ ಬೈಕ್ ಡಿಕ್ಕಿಯಾಗಿದ್ದು, ಬೈಕ್ ನಲ್ಲಿ ಇದ್ದಂತಹ ದಂಪತಿಗಳಾದ ಬಾಬು (30) ಹಾಗೂ ಸಾವಿತ್ರಿ (26) ಸ್ಥಳದಲ್ಲಿ ಸಾವನಪ್ಪಿದ್ದಾರೆ. ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದು, ಆರು ತಿಂಗಳ ಹಿಂದೆ ಅಷ್ಟೇ ಸಪ್ತಪದಿ ತುಳಿದ್ದರು. ಆದ್ರೆ, ವಿಧಿ ಜೋಡಿಯನ್ನು ಬಾಳಲು ಬಿಟ್ಟಿಲ್ಲ. ಈ ಸಂಬಂಧ ಸಂಬಂಧಿಕ ಆಕ್ರಂದನ ಮುಗಿಲು ಮುಟ್ಟಿದೆ.