
ನಟ ಪುನೀತ್ ರಾಜ್ಕುಮಾರ್ (Puneeth Rajkumar) ಹೆಸರಿನಲ್ಲಿ ಅವರ ಅಭಿಮಾನಿಗಳು ಪುಣ್ಯದ ಕೆಲಸಗಳನ್ನು ಮಾಡುತ್ತಿದ್ದಾರೆ. ಅದನ್ನು ನಟ ಪ್ರಥಮ್ ಮೆಚ್ಚಿಕೊಂಡಿದ್ದಾರೆ. ಇಂದು (ಮಾರ್ಚ್ 17) ಅಪ್ಪು ಹುಟ್ಟುಹಬ್ಬ. ಆ ಪ್ರಯುಕ್ತ ಅಪಾರ ಸಂಖ್ಯೆಯ ಅಭಿಮಾನಿಗಳು, ಕುಟುಂಬದವರು, ಅನೇಕ ಸೆಲೆಬ್ರಿಟಿಗಳು ಸಮಾಧಿ ಸ್ಥಳಕ್ಕೆ ಭೇಟಿ ನೀಡಿ ನಮನ ಸಲ್ಲಿಸಿದ್ದಾರೆ. ನಟ ಪ್ರಥಮ್ (Pratham) ಅವರು ಈ ವೇಳೆ ಮಾತನಾಡಿದರು. ‘ಅಭಿಮಾನಿಗಳು ನೇತ್ರದಾನ ಮಹಾದಾನ ಎಂಬ ಈ ಕೆಲಸವನ್ನು ನಾಲ್ಕು ವರ್ಷಗಳಿಂದ ಶ್ರಮವಹಿಸಿ ಮಾಡುತ್ತಿದ್ದಾರೆ. ಅಪ್ಪು ಸರ್ ಹೆಸರಲ್ಲಿ ಇದು ಅದ್ಭುತವಾದ ಕೆಲಸ. ಇಂಥ ಒಳ್ಳೆಯ ಕೆಲಸ ಮಾಡುವ ಅಭಿಮಾನಿಗಳ ಬಗ್ಗೆ ನನಗೆ ಯಾವಾಗಲೂ ಖುಷಿ ಆಗುತ್ತದೆ. ಯಾರಿಗೋ ಬೈಯ್ಯಿರಿ, ಹೊಡೆಯಿರಿ ಅಂತ ಪುನೀತ್ ರಾಜ್ಕುಮಾರ್ ಅಭಿಮಾನಿಗಳು ಹೇಳಲ್ಲ’ ಎಂದಿದ್ದಾರೆ ನಟ, ‘ಬಿಗ್ ಬಾಸ್ ಕನ್ನಡ 4’ ವಿನ್ನರ್ ಪ್ರಥಮ್.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.