ಅಮೃತಧಾರೆ: ಹೆಣ್ಣಿನ ಕಣ್ಣೀರು ಯುದ್ಧದ ಆರಂಭ; ಜೆಡಿಗೆ ಮಲ್ಲಿಯ ಎಚ್ಚರಿಕೆ

ಅಮೃತಧಾರೆ: ಹೆಣ್ಣಿನ ಕಣ್ಣೀರು ಯುದ್ಧದ ಆರಂಭ; ಜೆಡಿಗೆ ಮಲ್ಲಿಯ ಎಚ್ಚರಿಕೆ

ಜೀ ಕನ್ನಡದ ‘ಅಮೃತಧಾರೆ’ (Amruthadhare) ಧಾರಾವಾಹಿಯಲ್ಲಿ ಹೊಸ ಹೊಸ ತಿರುವುಗಳು ಎದುರಾಗುತ್ತಾ ಇವೆ. ಈಗ ಮಲ್ಲಿ ಮದುವೆ ಸಂಭ್ರಮ. ಈ ಮಲ್ಲಿ ಮದುವೆಯಲ್ಲಿ ಹಲವು ಡ್ರಾಮಾಗಳು ನಡೆದಿವೆ ಎಂದರೂ ತಪ್ಪಾಗಲಾರದು. ಏಕೆಂದರೆ ಮಲ್ಲಿ ಮದುವೆ ಮಾಡಲು ಪ್ಲ್ಯಾನ್ ಮಾಡಿದ್ದು ಜೆಡಿ. ತಾನೇ ಛೂ ಬಿಟ್ಟ ವ್ಯಕ್ತಿ ಜೊತೆ ಮದುವೆ ನಡೆಸೋದು ಜೆಡಿ ಪ್ಲ್ಯಾನ್ ಆಗಿತ್ತು. ಕೊನೆ ಕ್ಷಣದಲ್ಲಿ ಮದುವೆಯಿಂದ ಆ ವ್ಯಕ್ತಿಯನ್ನು ಓಡಿಸೋದು ಪ್ಲ್ಯಾನ್ ಆಗಿತ್ತು. ಆದರೆ, ಪ್ಲ್ಯಾನ್ ಉಲ್ಟಾ ಆಗಿದೆ, ಅಷ್ಟೇ ಅಲ್ಲ, ದೊಡ್ಡ ಎಚ್ಚರಿಕೆ ಕೂಡ ರವಾನೆ ಆಗಿದೆ ಎನ್ನಬಹುದು.

ಜೆಡಿಯು ಸುನಿಲ್ ಎಂಬಾತನನ್ನು ಮಲ್ಲಿ ಪ್ರೀತಿಸುವಂತೆ ಸೂಚನೆ ಕೊಟ್ಟು ಕಳುಹಿಸಿದ್ದನು. ಆ ಸೂಚನೆಯಂತೆ ಮಲ್ಲಿಯನ್ನು ಪ್ರೀತಿಸುವ ಕೆಲಸಕ್ಕೆ ಸುನೀಲ್ ಇಳಿಸಿದ್ದ. ಆದರೆ, ಮದುವೆ ಆಗುವ ಯಾವುದೇ ಪ್ಲ್ಯಾನ್ ಇದರಲ್ಲಿ ಇರಲಿಲ್ಲ. ಪ್ರೀತಿಸೋದು, ಕೊನೆಯ ಕ್ಷಣದಲ್ಲಿ ಆಕೆತನ್ನು ಬಿಟ್ಟು ಹೋಗೋದು ಪ್ಲ್ಯಾನ್ ಆಗಿತ್ತು. ಆದರೆ, ಹಾಗಾಗಿಲ್ಲ.

ಇದನ್ನೂ ಓದಿ: ‘ಅಮೃತಧಾರೆ’ ಧಾರಾವಾಹಿ: ಮಲ್ಲಿ ವಿವಾಹ ನಡೆಯೋದೆ ಅನುಮಾನ?

ಜೆಡಿ ಮಾಡಿದ ಪ್ಲ್ಯಾನ್ ಕೊನೆಯ ಕ್ಷಣದಲ್ಲಿ ಕೈ ಕೊಟ್ಟಿದೆ ಎಂದೇ ಹೇಳಬಹುದು. ಸುನೀಲ್ ಯಾರು ಎಂಬ ವಿಷಯ ಮೊದಲು ಗೊತ್ತಾಗಿದ್ದು ಗೌತಮ್ಗೆ. ಯಾವುದೇ ಕಾರಣಕ್ಕೂ ಈ ಮದುವೆ ನಡೆದೇ ನಡೆಯಬೇಕು ಎಂದು ಪಣ ತೊಟ್ಟನು. ಆದರೆ, ಈ ವಿಷಯ ನಂತರ ಗೊತ್ತಾಗಿದ್ದು ಭೂಮಿಕಾಗೆ. ಆಕೆ ಹೇಗಾದರೂ ಮಾಡಿ ಮದುವೆ ಮಾಡಿಸಲೇಬೇಕು ಎಂದು ಪಣ ತೊಟ್ಟಿದ್ದಾಳೆ.

 

View this post on Instagram

 

A post shared by Zee Kannada (@zeekannada)

ಕೊನೆಗೂ ಇವರ ಮದುವೆ ನಡೆದಂತೆ ಕಾಣಿಸುತ್ತದೆ. ಈಗ ರಿಲೀಸ್ ಆದ ಪ್ರೋಮೋದಲ್ಲಿ ಮಲ್ಲಿ ಕತ್ತಿನಲ್ಲಿ ತಾಳಿ ಕಾಣಿಸಿದೆ. ಹೀಗಾಗಿ ಮದುವೆ ನಡೆದಿದೆ ಎಂಬುದು ಸ್ಪಷ್ಟವಾಗಿದೆ. ಹೆಣ್ಣಿನ ಕಣ್ಣೀರು, ಯುದ್ಧದ ಆರಂಭ ಎಂದು ಮಲ್ಲಿ ಎಚ್ಚರಿಕೆ ನೀಡಿದ್ದಾಳೆ. ಈ ಎಚ್ಚರಿಕೆಯನ್ನು ಆತ ಯಾವ ರೀತಿಯಲ್ಲಿ ತೆಗೆದುಕೊಳ್ಳುತ್ತಾನೆ ಎಂಬ ಕುತೂಹಲ ಮೂಡಿದೆ. ಜೆಡಿ ಇಷ್ಟು ದಿನ ಹಾಯಾಗಿದ್ದ. ಮುಂದಿನ ದಿನಗಳಲ್ಲಿ ಅದನ್ನು ಬದಲಿಸುವ ಎಲ್ಲಾ ಸಾಧ್ಯತೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

 

Source link

Leave a Reply

Your email address will not be published. Required fields are marked *