ಅಮೆರಿಕದೊಂದಿಗೆ ವ್ಯಾಪಾರ ಒಪ್ಪಂದ; ದಾರಿ ತಪ್ಪಿಸುತ್ತಿರುವ ರಾಹುಲ್ ಗಾಂಧಿ: ವಾಣಿಜ್ಯ ಸಚಿವರ ಟೀಕೆ – Kannada News | This is the best deal from US among Indian neighbours, says Piyush Goyal

ನವದೆಹಲಿ, ಫೆಬ್ರುವರಿ 3: ಭಾರತ ಮತ್ತು ಅಮೆರಿಕ ನಡುವಿನ ಒಪ್ಪಂದವನ್ನು (India US trade deal) ವಾಣಿಜ್ಯ ಸಚಿವ ಪೀಯೂಶ್ ಗೋಯಲ್ (Piyush Goyal) ತುಂಬು ಹೃದಯದಿಂದ ಸ್ವಾಗತಿಸಿದ್ದಾರೆ. ಇದುದೇಶ ಹೆಮ್ಮೆ ಪಡಬಹುದಾದ ಒಪ್ಪಂದವಾಗಿದೆ. ಭಾರತದ ಯಾವುದೇ ನೆರೆಹೊರೆಯವರೊಂದಿಗೆ ಅಮೆರಿಕ ಮಾಡಿಕೊಂಡಿರುವ ಒಪ್ಪಂದಗಳಲ್ಲೇ ಇದು ಅತ್ಯುತ್ತಮ ಡೀಲ್ ಎಂದು ಪೀಯೂಶ್ ಗೋಯಲ್ ಬಣ್ಣಿಸಿದ್ದಾರೆ. ಇಂದು ಮಂಗಳವಾರ ಇದೇ ವಿಚಾರವಾಗಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ವಾಣಿಜ್ಯ ಸಚಿವರು, ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಧ್ಯದ ವೈಯಕ್ತಿಕ ಸ್ನೇಹದಿಂದ ಈ ಡೀಲ್ ಕುದುರಲು ಸಾಧ್ಯವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

‘ಅಮೆರಿಕದೊಂದಿಗೆ ಬಹಳ ಪ್ರಬಲ ವ್ಯಾಪಾರ ಒಪ್ಪಂದ ಮಾಡಿಕೊಂಡಿದ್ದಕ್ಕೆ ಇವತ್ತು ದೇಶದ ಪ್ರತಿಯೊಬ್ಬರೂ ಕೂಡ ಪ್ರಧಾನಿ ಮೋದಿಗೆ ಧನ್ಯವಾದ ಹೇಳುತ್ತಿದ್ದಾರೆ. ರಾಷ್ಟ್ರ ಮತ್ತು ಜನರ ಹಿತಾಸಕ್ತಿ ಗಮನದಲ್ಲಿ ಇಟ್ಟುಕೊಂಡು, ಭಾರತದ ಭವಿಷ್ಯವನ್ನು ಸುಭದ್ರಗೊಳಿಸಲು ಒಪ್ಪಂದವನ್ನು ಅಂತಿಮಗೊಳಿಸಲಾಗಿದೆ’ ಎಂದು ಪೀಯೂಶ್ ಗೋಯಲ್ ಹೇಳಿದ್ದಾರೆ.

ಇದನ್ನೂ ಓದಿ: ಏಷ್ಯನ್ ದೇಶಗಳ ಪೈಕಿ ಭಾರತಕ್ಕೆ ಕಡಿಮೆ ಟ್ಯಾರಿಫ್; ಅತಿ ಕಡಿಮೆ ಸುಂಕ ಎದುರಿಸುತ್ತಿರುವ ರಾಷ್ಟ್ರಗಳಿವು…

ಏನಿದು ಭಾರತ-ಅಮೆರಿಕ ಒಪ್ಪಂದ?

ಇತ್ತೀಚೆಗೆ 27 ರಾಷ್ಟ್ರಗಳ ಗುಂಪಾದ ಐರೋಪ್ಯ ಒಕ್ಕೂಟದೊಂದಿಗೆ ಭಾರತ ಟ್ರೇಡ್ ಡೀಲ್ ಮಾಡಿಕೊಂಡಿದೆ. ಅದನ್ನು ಮದರ್ ಆಫ್ ಆಲ್ ಡೀಲ್ಸ್ ಎಂದು ಬಣ್ಣಿಸಲಾಗುತ್ತಿದೆ. ಈಗ ಅಮೆರಿಕದೊಂದಿಗೆ ಭಾರತ ಮಾಡಿಕೊಳ್ಳಲಿರುವ ಒಪ್ಪಂದವು ಅದಕ್ಕಿಂತಲೂ ಬೃಹತ್ತಾಗಿರುವ ನಿರೀಕ್ಷೆ ಇದೆ. ಒಪ್ಪಂದ ಏರ್ಪಟ್ಟಿರುವುದನ್ನು ಟ್ರಂಪ್ ಮತ್ತು ಮೋದಿ ಘೋಷಿಸಿದ್ದಾರಾದರೂ ಮಾತುಕತೆ ಇನ್ನೂ ಅಂತಿಮಗೊಂಡಿಲ್ಲ. ಮಾತುಕತೆ ಮುಗಿದ ಬಳಿಕ ಒಪ್ಪಂದಕ್ಕೆ ಸಹಿ ಆದ ನಂತರ ಅದು ಚಾಲನೆಗೆ ಬರುತ್ತದೆ.

ಈ ಒಪ್ಪಂದದಲ್ಲಿ ಮಾಡಲಾಗಿರುವ ತೀರ್ಮಾನದ ಪ್ರಕಾರ ಭಾರತದ ಸರಕುಗಳಿಗೆ ಅಮೆರಿಕ ವಿಧಿಸುವ ಟ್ಯಾರಿಫ್ ಶೇ. 50ರಿಂದ ಶೇ. 18ಕ್ಕೆ ಇಳಿಕೆಯಾಗುತ್ತದೆ. ಅದೇ ವೇಳೆ, ಅಮೆರಿಕ ಸರಕುಗಳಿಗೆ ಭಾರತದ ಮಾರುಕಟ್ಟೆಗೆ ಮುಕ್ತ ಪ್ರವೇಶ ಸಿಗುತ್ತದೆ.

ಇದನ್ನೂ ಓದಿ: ಅಮೆರಿಕದೊಂದಿಗೆ ಟ್ರೇಡ್ ಡೀಲ್; ಭಾರತದ ಕೃಷಿ ಮಾರುಕಟ್ಟೆ ರಕ್ಷಣೆಯಲ್ಲಿ ರಾಜಿ ಇರೋದಿಲ್ಲವಾ?

ದಾರಿತಪ್ಪಿಸುತ್ತಿರುವ ರಾಹುಲ್ ಗಾಂಧಿ: ವಾಣಿಜ್ಯ ಸಚಿವರು ಟೀಕೆ

ಈ ವ್ಯಾಪಾರ ಒಪ್ಪಂದ ಮಾಡಿಕೊಂಡು ಅಮೆರಿಕಕ್ಕೆ ಭಾರತವನ್ನು ಮಾರಲಾಗುತ್ತಿದೆ ಎಂಬರ್ಥದಲ್ಲಿ ವಿಪಕ್ಷ ನಾಯಕ ರಾಹುಲ್ ಗಾಂಧಿ ಟೀಕೆ ಮಾಡಿದ್ದಾರೆ. ಇವರ ಹೇಳಿಕೆಯನ್ನು ಪಿಯೂಶ್ ಗೋಯಲ್ ಬಲವಾಗಿ ಖಂಡಿಸಿದ್ದಾರೆ.

ಇಷ್ಟು ದಿನ ರಾಹುಲ್ ಗಾಂಧಿ ಅಮೆರಿಕದೊಂದಿಗೆ ಒಪ್ಪಂದ ಆಗಿಲ್ಲ ಎಂದು ಪ್ರಶ್ನಿಸುತ್ತಿದ್ದರು. ಈಗ ಒಪ್ಪಂದ ಆದಾಗ ಅದನ್ನು ಟೀಕಿಸುತ್ತಿದ್ದಾರೆ. ಇದು ರಾಹುಲ್ ಗಾಂಧಿ ಅವರ ಆಷಾಢಭೂತಿತನ ತೋರುತ್ತದೆ. ಅವರು ದೇಶದ ಜನರ ದಾರಿತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ವಾಣಿಜ್ಯ ಸಚಿವರು ಸಿಡಿಗುಟ್ಟಿದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *