ಅಯೋಧ್ಯೆಯ ರಾಮಮಂದಿರ ನಿರ್ಮಾಣದಲ್ಲಿ ದೊಡ್ಡ ಪ್ರಮಾಣದ ಭ್ರಷ್ಟಾಚಾರ ನಡೆದಿದೆ: ಪ್ರಿಯಾಂಕ್​​ ಖರ್ಗೆ – Kannada News | Congress Leader Priyank Kharge Accuses BJP of Corruption in Ayodhya Temple Construction

ಕಲಬುರಗಿ, ಜುಲೈ 06: ಅಯೋಧ್ಯೆಯ ರಾಮಮಂದಿರ ನಿರ್ಮಾಣದಲ್ಲಿ ದೊಡ್ಡ ಪ್ರಮಾಣದ ಭ್ರಷ್ಟಾಚಾರ ನಡೆದಿದೆ ಎಂದು ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್​​ ಖರ್ಗೆ ಆರೋಪಿಸಿದ್ದಾರೆ. ರಾಮಮಂದಿರ ನಿರ್ಮಾಣದ ಉಸ್ತುವಾರಿ ವಹಿಸಿದ್ದ ಗೋಪಾಲ್ ಜಿ ಅವರು ತಮ್ಮ ಅಳಿಯನಿಗೆ ಶೇ.40ರಷ್ಟು ಕಮಿಷನ್ ಪಡೆದು ಗುತ್ತಿಗೆಯನ್ನು ನೀಡಿದ್ದಾರೆ ಎಂದು ಖರ್ಗೆ ಹೇಳಿದ್ದಾರೆ. ಬಿಜೆಪಿ ಅಯೋಧ್ಯೆಯಲ್ಲಿ ಕಮಿಷನ್ ಪಡೆದಿದೆ ಎಂದು ದೂರಿದ ಅವರು, ಅಯೋಧ್ಯೆ ರಾಮಮಂದಿರ ಟ್ರಸ್ಟ್‌ನ ನಿರ್ವಹಣೆಯ ಬಗ್ಗೆಯೂ ಪ್ರಶ್ನಿಸಿದ್ದಾರೆ. ಟ್ರಸ್ಟ್ ಸಭೆ ಯಾವ ವಿಚಾರಕ್ಕೆ ನಡೆಯುತ್ತಿದೆ? ಚಂಪತ್ ರಾಯ್ ಮತ್ತು ಗೋಪಾಲ್ ಮಿಶ್ರಾ ಅವರ ರಾಜೀನಾಮೆ ಬಗ್ಗೆ ಚರ್ಚಿಸಲು ಅಲ್ಲವೇ. ಇವರು ಆರ್‌ಎಸ್‌ಎಸ್‌ನಿಂದ ತರಬೇತಿ ಪಡೆದಿದ್ದಾರೆ ಎಂದು ಅವರು ಉಲ್ಲೇಖಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

Leave a Reply

Your email address will not be published. Required fields are marked *