
ಮಂಗಳೂರು, ಜುಲೈ 17: ಸುರತ್ಕಲ್ ಬಳಿಯ ಅರಬ್ಬಿ ಸಮುದ್ರದಲ್ಲಿ ನಾಡ ದೋಣಿಯೊಂದು ಮಗುಚಿರುವ ಘಟನೆ ವರದಿಯಾಗಿದೆ. ಭಾರೀ ಮಳೆ, ಗಾಳಿ ಮತ್ತು ದೊಡ್ಡ ಅಲೆಗಳಿಂದಾಗಿ ಸಮುದ್ರದಲ್ಲಿ ನೀರಿನ ರಭಸ ಹೆಚ್ಚಿತ್ತು. ಈ ಪ್ರತಿಕೂಲ ಹವಾಮಾನದ ನಡುವೆ ಮೀನುಗಾರಿಕೆಗೆ ತೆರಳಿದ್ದ ನಾಡ ದೋಣಿಯೊಂದು ನಿಯಂತ್ರಣ ತಪ್ಪಿ ಮುಗುಚಿದೆ. ದೋಣಿಯಲ್ಲಿದ್ದ ನಾಲ್ವರು ಮೀನುಗಾರರು ನೀರಿಗೆ ಬಿದ್ದರೂ, ಈಜಿ ಸುರಕ್ಷಿತವಾಗಿ ದಡ ಸೇರುವಲ್ಲಿ ಯಶಸ್ವಿಯಾಗಿದ್ದಾರೆ. ಈ ಘಟನೆ ಸೂರತ್ಕಲ್ ಲೈಟ್ ಹೌಸ್ ಸಮೀಪ ನಡೆದಿದ್ದು, ಯಾವುದೇ ರೀತಿಯ ಸಾವು-ನೋವುಗಳು ಸಂಭವಿಸಿಲ್ಲ. ಸ್ಥಳಕ್ಕೆ ಭೇಟಿ ನೀಡಿರುವ ಸೂರತ್ಕಲ್ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.