ಅವನ ಸಹವಾಸ ಬೇಡ ಅಂದ್ರೂ ಕೇಳಿಲ್ಲ: ಪ್ರಿಯಕರನ ಅಸಲಿಮುಖ ಬಿಚ್ಚಿಟ್ಟ ಮಂಗಳಮುಖಿ – Kannada News | Love Turns Tragic in Ballary: Transgender Talks about Partners death

ಬಳ್ಳಾರಿ, (ಫೆಬ್ರವರಿ 18): ಪ್ರೀತಿ ಪ್ರೇಮ ಎಂದು ನಂಬಿಸಿ ಕೊನೆಗೆ ಹಣಕ್ಕಾಗಿ ಕೊಲೆ ಮಾಡಿದ್ದಾನೆ ಎಂಬ ಗಂಭೀರ ಆರೋಪಗಳ ನಡುವೆಯೇ ಬಳ್ಳಾರಿಯಲ್ಲಿ ಪ್ರೇಮಿಗಳಿಬ್ಬರ ಮೃತದೇಹಗಳು ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾಗಿವೆ. ನಗರದ ಕೆಎಂಎಫ್ (KMF) ಡೈರಿ ಕ್ರಾಸ್ ಬಳಿಯ ಬಾಡಿಗೆ ಮನೆಯಲ್ಲಿ ಈ ದಾರುಣ ಘಟನೆ ನಡೆದಿದೆ. ಮೃತ ದುರ್ದೈವಿಗಳನ್ನು ವಿಜಯನಗರ ಜಿಲ್ಲೆ ಹೊಸಪೇಟೆ ತಾಲೂಕಿನ ಮಲ್ಪನಗುಡಿ ಗ್ರಾಮದ ಆಟೋ ಚಾಲಕ ಶೇಖರ್ ಅಲಿಯಾಸ್ ಮಣಿ (31) ಹಾಗೂ ಬಳ್ಳಾರಿ ತಾಲೂಕಿನ ಚಾಗನೂರ ಗ್ರಾಮದ ನಿವಾಸಿ, ಮಂಗಳಮುಖಿ ಸುಹಾಸಿನಿ (29) ಎಂದು ಗುರುತಿಸಲಾಗಿದೆ. ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ ಇವರಿಬ್ಬರ ಮೃತದೇಹಗಳು ಮನೆಯ ಕಿಡಕಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿವೆ. ಇದು ಆತ್ಮತ್ಯೆಯೋ ಅಥವಾ ಕೊಲೆಯೋ ಎಂಬ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಸ್ಥಳಕ್ಕೆ ಬ್ರೂಸ್‌ಪೇಟೆ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಈ ಬಗ್ಗೆ ಮಂಗಳಮುಖಿಯೊಬ್ಬರು ಸ್ಫೋಟ ಮಾಹಿತಿ ಬಿಚ್ಚಿಟ್ಟಿದ್ದಾರೆ.

ಇದನ್ನೂ ಓದಿ: ಮಂಗಳಮುಖಿ ಎಂದು ಗೊತ್ತಿದ್ದರೂ ಪ್ರೀತಿಯಲ್ಲಿ ಬಿದ್ದ ಯುವಕ: ಆಮೇಲಾಗಿದ್ದು ದುರಂತ

Source link

Leave a Reply

Your email address will not be published. Required fields are marked *