ಹಾಸನ, ಜುಲೈ 18: ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಕುಟುಂಬದ ಸದಸ್ಯರಿಗೆ ಆಘಾತ ಉಂಟಾಗಿದೆ. ಚೆನ್ನಮ್ಮ ಅವರ ಸಹೋದರ ವಿಶ್ವನಾಥ್, ಅಕ್ಕನ ನಿಧನಕ್ಕೆ ಅತೀವ ದುಃಖ ವ್ಯಕ್ತಪಡಿಸಿದ್ದು, ‘‘ಅವರು ನಮ್ಮ ಕುಟುಂಬಕ್ಕೆ ದೇವರಾಗಿದ್ದರು. ನಮ್ಮನ್ನು ಸಾಕಿ, ಬೆಳೆಸಿದ್ದು ಅವರೇ. ಕುಟುಂಬದ ಎಲ್ಲಾ ಜವಾಬ್ದಾರಿಗಳನ್ನು ಚೆನ್ನಮ್ಮ ವಹಿಸಿಕೊಂಡಿದ್ದರು. ನಾವು ಅವರ ಹಾಕಿದ ಗೆರೆ ದಾಟುತ್ತಿರಲಿಲ್ಲ. ಅವರು ನಮಗೆ ದೇವರು. ಅವರ ನೆರವಿನಿಂದಲೇ ನಾವು ಉತ್ತಮ ಉದ್ಯೋಗ ಪಡೆದು ಗೌರವಯುತ ಜೀವನ ನಡೆಸಲು ಸಾಧ್ಯವಾಯಿತು. ಪತಿ ಪ್ರಧಾನಿ, ಪುತ್ರ ಮುಖ್ಯಮಂತ್ರಿ ಮತ್ತು ಸಚಿವರಾದರು, ಅಳಿಯ ದೊಡ್ಡ ವೈದ್ಯರಾದರೂ ಚೆನ್ನಮ್ಮ ಅವರು ಎಂದಿಗೂ ಸರಳತೆ ಕಾಯ್ದುಕೊಂಡಿದ್ದರು. ಯಾವುದೇ ಅಹಂ ಇಲ್ಲದೆ ಜೀವನ ಸಾಗಿಸಿದರು’’ ಎಂದು ಹೇಳಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.