ಆಂಧ್ರಪ್ರದೇಶ, ಏಪ್ರಿಲ್ 20: ಇಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರ ಹುಟ್ಟುಹಬ್ಬ. ಈ ಪ್ರಯುಕ್ತ ನಾಯ್ಡು ದಂಪತಿ ವಿಜಯವಾಡದಲ್ಲಿರುವ ಪಟಮಟ ಅನ್ನ ಕ್ಯಾಂಟೀನ್ಗೆ ಬಂದಿದ್ದರು.ಅಲ್ಲಿ ಅವರು ಬಡವರಿಗೆ ಉಪಾಹಾರ ಬಡಿಸಿದರು. ಈ ಭೇಟಿಯ ಸಮಯದಲ್ಲಿ ಅನಿರೀಕ್ಷಿತ ಘಟನೆಯೊಂದು ಸಂಭವಿಸಿತ್ತು. ಕಾರ್ಯಕ್ರಮದ ನಂತರ ಸಿಎಂ ಹೊರಗೆ ಮಾಧ್ಯಮಗಳೊಂದಿಗೆ ಮಾತನಾಡುತ್ತಿದ್ದಾಗ, ಅವರ ಸುರಕ್ಷತಾ ತಂಡದ ಭಾಗವಾಗಿದ್ದ ಎನ್ಎಸ್ಜಿ ಕಮಾಂಡೋ ವಿಪರೀತ ಸೆಕೆಯಿಂದಾಗಿ ಕುಸಿದುಬಿದ್ದಿದ್ದಾರೆ. ಮಾಹಿತಿ ತಿಳಿದ ಇತರ ಭದ್ರತಾ ಸಿಬ್ಬಂದಿ ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಿದರು. ತೀವ್ರ ಬಿಸಿಲಿನಿಂದಾಗಿ ಸುಸ್ತಾಗಿ ಬಿದ್ದಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
