
ಆನೇಕಲ್, ಏಪ್ರಿಲ್ 3: ಬೆಂಗಳೂರು ಹೊರವಲಯದ ಆನೇಕಲ್ ತಾಲ್ಲೂಕಿನ ಚೂಡೇನಹಳ್ಳಿ ಗ್ರಾಮದಲ್ಲಿ ಕಾಡಾನೆಗಳ ಉಪಟಳ ಮಿತಿಮೀರಿದೆ. ಕಳೆದ ಒಂದು ವಾರದಿಂದ ಗ್ರಾಮದ ಸುತ್ತಮುತ್ತಲೇ ಬೀಡುಬಿಟ್ಟಿರುವ ಗಜಪಡೆ, ಪ್ರತಿ ರಾತ್ರಿ ಜಮೀನುಗಳಿಗೆ ನುಗ್ಗಿ ಬೆಳೆ ನಾಶಪಡಿಸುತ್ತಿವೆ. ರೈತರು ಕಷ್ಟಪಟ್ಟು ಬೆಳೆದ ಬೆಳೆ ಆನೆಗಳ ಪಾಲಾಗುತ್ತಿದ್ದು, ಜೀವ ಭಯದಲ್ಲಿರುವ ಗ್ರಾಮಸ್ಥರು ಮನೆಯಿಂದ ಹೊರಬರಲು ನಡುಗುವಂತಾಗಿದೆ. ಕೂಡಲೇ ಅರಣ್ಯ ಇಲಾಖೆ ಮಧ್ಯಪ್ರವೇಶಿಸಿ ಆನೆಗಳನ್ನು ಕಾಡಿಗಟ್ಟಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ. ಈ ಮಧ್ಯೆ, ಗ್ರಾಮದಲ್ಲಿ ಆನೆಗಳ ನೈಟ್ ರೌಂಡ್ಸ್ ವಿಡಿಯೋ ವೈರಲ್ ಆಗುತ್ತಿದೆ.