
ಬೆಂಗಳೂರು, ಮೇ,23: ಆನೇಕಲ್ನಲ್ಲಿ ದೇಶದ 2ನೇ ಅತೀ ದೊಡ್ಡ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣಕ್ಕೆ ಶಂಕುಸ್ಥಾಪನೆ ಸಮಾರಂಭ ವಿಜೃಂಭಣೆಯಿಂದ ನಡೆಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಐತಿಹಾಸಿಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಿದಾಗ ಅವರಿಗೆ ಭವ್ಯ ಸ್ವಾಗತ ದೊರೆಯಿತು. ಸಿದ್ದರಾಮಯ್ಯ ಅವರನ್ನು ಸ್ವಾಗತಿಸಲು ಅಪಾರ ಸಂಖ್ಯೆಯ ಜನರು ನೆರೆದಿದ್ದರು. ಈ ಹೊಸ ಕ್ರಿಕೆಟ್ ಸ್ಟೇಡಿಯಂ ಬೆಂಗಳೂರಿನ ಕ್ರೀಡಾ ಲೋಕಕ್ಕೆ ಒಂದು ದೊಡ್ಡ ಮೈಲಿಗಲ್ಲು ಆಗಲಿದೆ. ಇದು ಚಿನ್ನಸ್ವಾಮಿ ಸ್ಟೇಡಿಯಂ ನಂತರ ಮತ್ತೊಂದು ಪ್ರಮುಖ ಕ್ರಿಕೆಟ್ ಅಖಾಡವಾಗಿ ಹೊರಹೊಮ್ಮಲಿದೆ. ಕಾರ್ಯಕ್ರಮದ ನಿಮಿತ್ತ ನೆರೆದಿದ್ದ ಜನಸಮೂಹದಲ್ಲಿ ಸಂಭ್ರಮ ಮನೆ ಮಾಡಿತ್ತು. ಜನರು ಪರಸ್ಪರ ಶುಭ ಕೋರಿ ಸಂಭ್ರಮ ವ್ಯಕ್ತಪಡಿಸುತ್ತಿದ್ದರು. ಚೆಲ್ಲಾ ಚೆಲ್ಲಾನೆ ಉದುರವ್ವ ಎಂಬಂತಹ ಹಾಡುಗಳ ಮೂಲಕ ಸಂಭ್ರಮ ಹೆಚ್ಚಾಗಿತ್ತು. ಈ ಸಮಾರಂಭದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಸಚಿವ ಜಮೀರ್ ಅಹಮದ್ ಸೇರಿದಂತೆ ಹಲವು ಗಣ್ಯರು ಹಾಜರಿದ್ದರು. ಹೊಸ ಕ್ರಿಕೆಟ್ ಸ್ಟೇಡಿಯಂ ಬೆಂಗಳೂರಿನ ಕ್ರೀಡಾ ಮೂಲಸೌಕರ್ಯವನ್ನು ಗಣನೀಯವಾಗಿ ಹೆಚ್ಚಿಸಲಿದೆ. ಈ ವೇಳೆ ಸಿಎಂ ಸಿದ್ದರಾಮಯ್ಯ ಅವರಿಗೆ ಆರತಿ ಮಾಡಿ ಸ್ವಾಗತಿಸಲಾಗಿತ್ತು. ಆರತಿ ಮಾಡಿದ ಮಹಿಳೆಯರಿಗೆ ಗರಿಗರಿ ನೋಟನ್ನು ಸಿಎಂ ನೀಡಿದ್ದಾರೆ.
ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ