ಆರ್​ಎಸ್​ಎಸ್​ನವರು ಪುಕ್ಕಲರು, ನಾವು ಮೈಮರೆತ್ತಿದ್ದಕ್ಕೆ ವಿಜೃಂಭಿಸುತ್ತಿದ್ದಾರೆ: ಹರಿಪ್ರಸಾದ್ ಕಿಡಿ – Kannada News | BK Hariprasad Hits at RSS And BJP in KPCC President swearing in ceremony

ಬೆಂಗಳೂರು, (ಜೂನ್ 21): ಬಿಕೆ ಹರಿಪ್ರಸಾದ್ (BK Hariprasad) ಅವರು ಕೆಪಿಸಿಸಿ ಅಧ್ಯಕ್ಷರಾಗಿ ಅಧಿಕೃತವಾಗಿ ಅಧಿಕಾರ ಸ್ವೀಕರಿಸಿದರು. ಇಂದು (ಜೂನ್ 21) ಬೆಂಗಳೂರು ಅರಮನೆ ಮೈದಾನದಲ್ಲಿ ನಡೆದ ಅಧಿಕಾರ ಸ್ವೀಕಾರ ಕಾರ್ಯಕ್ರಮದಲ್ಲಿ ಹಿಂದಿನ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಂದ ಬಿಕೆ ಹರಿಪ್ರಸಾದ್ ಅವರು ಧ್ವಜ ಸ್ವೀಕರಿಸಿದರು. ಈ ಮೂಲಕ ಅಧಿಕೃತವಾಗಿ ಕೆಪಿಸಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಿದರು. ಬಳಿಕ ಮಾತನಾಡಿ ಹರಿಪ್ರಸಾದ್, ಬಿಜೆಪಿ ಹಾಗೂ ಆರ್​​ಎಸ್​​ಎಸ್​ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಗೋಡ್ಸೆ ಒಬ್ಬ ಈ ದೇಶದ ಮೊಟ್ಟಮೊದಲ ಉಗ್ರ ಎಂದು ಬಿಜೆಪಿ ಹೇಳಿಲ್ಲ. ಗೋಡ್ಸೆ ಒಬ್ಬ ಕೊಲೆಗಾರ ಎಂದು ಬಿಜೆಪಿಯವರು ಇದುವರೆಗೆ ಹೇಳಿಲ್ಲ. ಆರ್​ಎಸ್​ಎಸ್​ನವರು ಪುಕ್ಕಲರು ಅವರಿಗೆ ಧೈರ್ಯವೇ ಇಲ್ಲ. ನಾವು ಮೈಮರೆಯುತ್ತಿದ್ದೇವೆ. ಅದಕ್ಕಾಗಿ ಅವರು ವಿಜೃಂಭಿಸುತ್ತಿದ್ದಾರೆ ಎಂದು ಆರ್​​ಎಸ್​​ಎಸ್ ಹಾಗೂ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *