ಆರ್​​ಸಿಬಿ ವಿರುದ್ಧದ ಪಂದ್ಯಕ್ಕೆ ಥಲಾ ಲಭ್ಯ? ಧೋನಿ ಫ್ಯಾನ್ಸ್​​ಗೆ ಖುಷಿ ಸುದ್ದಿ

ಆರ್​​ಸಿಬಿ ವಿರುದ್ಧದ ಪಂದ್ಯಕ್ಕೆ ಥಲಾ ಲಭ್ಯ? ಧೋನಿ ಫ್ಯಾನ್ಸ್​​ಗೆ ಖುಷಿ ಸುದ್ದಿ

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಪಂದ್ಯಕ್ಕೆ ಚಿನ್ನಸ್ವಾಮಿ ಸ್ಟೇಡಿಯಂ ಸಿದ್ಧವಾಗುತ್ತಿದೆ. ಈ ಪಂದ್ಯ ನೋಡಲು ಅಭಿಮಾನಿಗಳು ಕಾದಿದ್ದಾರೆ. ಧೋನಿ ಅವರು ಸ್ನಾಯು ಸೆಳೆತದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಹೀಗಾಗಿ ಅವರಿಗೆ ಎರಡು ವಾರ ರೆಸ್ಟ್ ಸೂಚಿಸಲಾಗಿತ್ತು. ಆದರೆ, ಅವರು ಈಗ ಆರ್​​ಸಿಬಿ ವಿರುದ್ಧ ಪಂದ್ಯಕ್ಕೆ ಲಭ್ಯರಾಗುತ್ತಾರಾ ಎನ್ನುವ ಕುತೂಹಲ ಮೂಡಿದೆ.

ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಚೆನ್ನೈ ಹೀನಾಯವಾಗಿ ಸೋತಿತು. ಇಂದು (ಏಪ್ರಿಲ್ 3) ಚೆನ್ನೈ ತಂಡ ಪಂಜಾಬ್ ಅನ್ನು ಎದುರಿಸಲಿದೆ. ಈ ಪಂದ್ಯದಲ್ಲಿ ಲಯಕ್ಕೆ ಮರಳುವ ತವಕದಲ್ಲಿ ಸಿಎಸ್​​ಕೆ ಇದೆ. ಧೋನಿ ಇದ್ದಿದ್ದರೆ ಒಂದಷ್ಟು ಮಾರ್ಗದರ್ಶನ ಸಿಗುತ್ತಿತ್ತು ಎಂಬುದು ಪ್ರೇಕ್ಷಕರ ಆಲೋಚನೆ. ಆದರೆ, ಅವರು ಇಂದಿನ ಪಂದ್ಯಕ್ಕೆ ಲಭ್ಯವಾಗೋದು ಅನುಮಾನ.

ಧೋನಿ ಅವರು ಇತ್ತೀಗೆ ಪ್ರ್ಯಾಕ್ಟಿಸ್ ಸೆಷನ್ ಅಲ್ಲಿ ಭಾಗಿ ಆಗಿದ್ದಾರೆ. ಈ ಮೂಲಕ ಅಭಿಮಾನಿಗಳಿಗೆ ಖುಷಿ ಸುದ್ದಿ ಸಿಕ್ಕಿದೆ. ಇಂದು ಕೂಡ ಚೆನ್ನೈ ಸೂಪರ್ ಕಿಂಗ್ಸ್ ಪರ್ಫಾರ್ಮೆನ್ಸ್ ಕಳಪೆ ಆಗಿದ್ದರೆ ತಂಡವನ್ನು ಉಳಿಸಲು ಧೋನಿ ಅವರು ಎಂಟ್ರಿ ಆಗಬಹುದು ಎಂದು ಹೇಳಲಾಗುತ್ತಾ ಇದೆ. ಹಾಗಾದಲ್ಲಿ ಬೆಂಗಳರಲ್ಲಿ ನಡೆಯುವ ಪಂದ್ಯಕ್ಕೆ ಧೋನಿ ಇರಲಿದ್ದಾರೆ.

ಇದನ್ನೂ ಓದಿ: ಆರ್​​​ಸಿಬಿ ಮಾರಾಟದಿದ ವಿಜಯ್ ಮಲ್ಯಗೆ ಸಿಕ್ಕ ಹಣ ಎಷ್ಟು?

ಆರ್​​​ಸಿಬಿ ಹಾಗೂ ಸಿಎಸ್​​ಕೆ ಮ್ಯಾಚ್ ಆದರೆ ಅಭಿಮಾನಿಗಳು ಇದನ್ನು ಬದ್ಧ ವೈರಿಗಳ ಮ್ಯಾಚ್ ಎಂಬ ರೀತಿಯಲ್ಲಿ ಪರಿಗಣಿಸುತ್ತಾರೆ. ಕಳೆದ ಸೀಸನ್​ ಅಲ್ಲಿ ಚೆನ್ನೈ ಎರಡೂ ಪಂದ್ಯಗಳನ್ನು ಆರ್​​ಸಿಬಿ ವಿರುದ್ಧ ಚೆನ್ನೈ ಸೋತಿದೆ. ಈ ಬಾರಿಯೂ ಅದೇ ಫಾರ್ಮ್ ಉಳಿಸಿಕೊಳ್ಳುವ ಆಲೋಚನೆ ಚೆನ್ನೈಗೆ ಇದೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Leave a Reply

Your email address will not be published. Required fields are marked *