ಆರ್​ ಅಶೋಕ್‌ ಹೇಳಿದ ಮನಕಲಕುವ ಸತ್ಯ ಘಟನೆಗೆ ಸದನವೇ ನಿಶ್ಯಬ್ದ

ಆರ್​ ಅಶೋಕ್‌ ಹೇಳಿದ ಮನಕಲಕುವ ಸತ್ಯ ಘಟನೆಗೆ ಸದನವೇ ನಿಶ್ಯಬ್ದ

ಬೆಂಗಳೂರು, ಮಾರ್ಚ್​ 10: ಕರ್ನಾಟಕ ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕ ಆರ್​​. ಅಶೋಕ್ ರಾಜ್ಯ ಸರ್ಕಾರದ ಸಾಮಾಜಿಕ ಕಲ್ಯಾಣ ಯೋಜನೆಗಳ ಅನುಷ್ಠಾನದಲ್ಲಿನ ವಿಳಂಬ ಮತ್ತು ಆದ್ಯತೆಗಳ ಬಗ್ಗೆ ಗಂಭೀರ ಕಳವಳ ವ್ಯಕ್ತಪಡಿಸಿದ್ದಾರೆ. ಭಿಕ್ಷಾಟನೆ ನಿರ್ಮೂಲನೆಗಾಗಿ ಸಂಗ್ರಹಿಸಲಾದ 3% ಸೆಸ್‌ನಿಂದ ಕೇಂದ್ರ ಪರಿಹಾರ ಸಮಿತಿಗೆ ನೀಡಬೇಕಾದ 23.43 ಕೋಟಿ ರೂ. ಬಾಕಿ ಉಳಿದಿದೆ ಎಂದು ಸದನದ ಗಮನ ಸೆಳೆದರು. ಅಲ್ಲದೆ, ಕೋವಿಡ್‌ ಅಥವಾ ಇತರೆ ದುರಂತಗಳಿಂದ ಪೋಷಕರನ್ನು ಕಳೆದುಕೊಂಡ 26 ಸಾವಿರ ಅನಾಥ ಮಕ್ಕಳಿಗೆ ಕಳೆದ ಏಳು ತಿಂಗಳಿಂದ ಮಾಸಾಶನ ಪಾವತಿಸಿಲ್ಲ. ಈ ಮಕ್ಕಳಿಗೆ ತಿಂಗಳಿಗೆ 4 ಸಾವಿರ ರೂ ಘೋಷಿಸಿದ್ದರೂ, ಸುಮಾರು 73-74 ಕೋಟಿ ರೂ. ಬಾಕಿ ಉಳಿದಿದೆ. ಸರ್ಕಾರಕ್ಕೆ ಕರುಣೆ ಇಲ್ಲ ಎಂದು ಆರ್​ ಅಶೋಕ್ ಕಿಡಿಕಾರಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Source link

Leave a Reply

Your email address will not be published. Required fields are marked *