ಆ ಶಾಸಕರಿಂದಲೇ ಅಡ್ಡಮತದಾನ? ಸತ್ಯಶೋಧನಾ ಸಮಿತಿ ವರದಿ ಬಗ್ಗೆ ಸಿಟಿ ರವಿ ಏನಂದ್ರು ನೋಡಿ – Kannada News | BJP Cross Voting: Fact Finding Committee Head CT Ravi Says Interim Report Ready, Admits Suspicion on Certain MLAs

ಚಿಕ್ಕಮಗಳೂರು, ಜೂನ್ 24: ವಿಧಾನ ಪರಿಷತ್ ಚುನಾವಣೆಯಲ್ಲಿ ನಡೆದ ಅಡ್ಡಮತದಾನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಎಂಎಲ್ಸಿ, ಸತ್ಯಶೋಧನಾ ಸಮಿತಿಯ ನೇತೃತ್​ವ ವಹಿಸಿರುವ ಸಿಟಿ ರವಿ ಪ್ರಮುಖ ಹೇಳಿಕೆ ನೀಡಿದ್ದಾರೆ. ಮೂವರು ಸದಸ್ಯರ ತಂಡವು ಈ ಕುರಿತು ಮಧ್ಯಂತರ ವರದಿಯನ್ನು ಸಿದ್ಧಪಡಿಸಿದೆ ಎಂದು ಅವರು ತಿಳಿಸಿದ್ದಾರೆ. ಈ ವರದಿಯು ವಿವಿಧ ಮೂಲಗಳಿಂದ ಸಂಗ್ರಹಿಸಿದ ಮಾಹಿತಿಗಳನ್ನು ಆಧರಿಸಿದೆ. ವರದಿಯ ಸಿದ್ಧತೆಯ ಸಂದರ್ಭದಲ್ಲಿ ಮೂವರೂ ಒಮ್ಮತಕ್ಕೆ ಬಂದ ಅಂಶಗಳನ್ನು ಮಾತ್ರ ವರದಿಯಲ್ಲಿ ಸೇರಿಸಲಾಗಿದೆ. ಈ ವರದಿಯು ಗೌಪ್ಯ ಸ್ವರೂಪದ್ದಾಗಿದ್ದು, ರಾಜ್ಯಾಧ್ಯಕ್ಷರಿಗೆ ಸಲ್ಲಿಸುವ ಮುನ್ನ ಅದರ ಕುರಿತು ಸಾರ್ವಜನಿಕವಾಗಿ ಚರ್ಚಿಸುವುದಿಲ್ಲ ಎಂದು ಸಿಟಿ ರವಿ ಹೇಳಿದ್ದಾರೆ.

ರಾಜ್ಯಾಧ್ಯಕ್ಷರು ಸದ್ಯ ದೆಹಲಿಯಲ್ಲಿದ್ದು, ಅವರು ಮರಳಿ ಬಂದ ನಂತರ ವರದಿಯನ್ನು ಅವರಿಗೆ ಹಸ್ತಾಂತರಿಸಲಾಗುವುದು. ಅಡ್ಡಮತದಾನ ಮಾಡಿದ ಶಾಸಕರ ಬಗ್ಗೆ ನಿರ್ದಿಷ್ಟವಾಗಿ ಆರೋಪ ಮಾಡಲು ಸಾಧ್ಯವಿಲ್ಲವಾದರೂ, ಕೆಲವರ ಮೇಲೆ ಅನುಮಾನಗಳಿವೆ ಎಂದು ಸಿ.ಟಿ. ರವಿ ತಿಳಿಸಿದ್ದಾರೆ. ಈ ಎಲ್ಲಾ ವಿವರಗಳನ್ನು ವರದಿಯಲ್ಲಿ ಉಲ್ಲೇಖಿಸಲಾಗಿದೆ ಎಂದೂ ಅವರು ಹೇಳಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *