Headlines

ಇಂಡಿಯಾ ಸೋತರೆ… ಅಮೀರ್ ಗೆ ಸವಾಲಾಕಿದ ಪಾಕ್ ಕ್ರಿಕೆಟಿಗ – Kannada News | Pakistan’s Ahmed Shehzad and Mohammad Amir place bets over India’s Semi Final Spot

T20 World Cup 2026: ಟಿ20 ವಿಶ್ವಕಪ್​ನ ಸೆಮಿಫೈನಲ್​ಗೆ ವೇದಿಕೆ ಸಿದ್ಧವಾಗಿದೆ. ಈ ಸೆಮಿಫೈನಲ್​ ಸುತ್ತಿಗೂ ಮುನ್ನ ಸೂಪರ್-8 ಲೀಗ್​ನ ಕೊನೆಯ ಪಂದ್ಯದಲ್ಲಿ ಭಾರತ ಮತ್ತು ವೆಸ್ಟ್ ಇಂಡೀಸ್ ತಂಡಗಳು ಮುಖಾಮುಖಿಯಾಗಿದ್ದವು. ಸೆಮಿಫೈನಲ್​ಗೇರಲು ಉಭಯ ತಂಡಗಳ ಪಾಲಿಗೆ ನಿರ್ಣಾಯಕವಾಗಿದ್ದ ಈ ಪಂದ್ಯಕ್ಕೂ ಮುನ್ನ ಪಾಕಿಸ್ತಾನ್ ಕ್ರಿಕೆಟಿಗರಾದ ಅಹ್ಮದ್ ಶೆಹಝಾದ್ ಹಾಗೂ ಮೊಹಮ್ಮದ್ ಅಮೀರ್ ಬಹಿರಂಗವಾಗಿಯೇ ಪಂಥ ಕಟ್ಟಿದ್ದರು. ಅದು ಸಹ ಶೋ ತ್ಯಜಿಸುತ್ತೇನೆ ಎನ್ನುವ ಮೂಲಕ ಎಂಬುದು ವಿಶೇಷ.

ಪಾಕಿಸ್ತಾನದ ಜಿಯೋ ಚಾನೆಲ್​ನಲ್ಲಿ ಪ್ರಸಾರವಾಗುವ ಹಸ್ನಾ ಮನಾ ಹೈ ಕ್ರಿಕೆಟ್ ಕಾರ್ಯಕ್ರಮದಲ್ಲಿ ಮಾಜಿ ಕ್ರಿಕೆಟಿಗರಾದ ಮೊಹಮ್ಮದ್ ಅಮೀರ್, ಅಹ್ಮದ್ ಶೆಹಝಾದ್ ಹಾಗೂ ರಶೀದ್ ಲತೀಫ್ ವಿಶ್ಲೇಷಕರಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಇತ್ತ ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಣ ನಿರ್ಣಾಯಕ ಪಂದ್ಯದ ವಿಶ್ಲೇಷಣೆ ವೇಳೆ ಮೊಹಮ್ಮದ್ ಅಮೀರ್ ಟೀಮ್ ಇಂಡಿಯಾ ಸೆಮಿಫೈನಲ್​ಗೇರಲ್ಲ ಎಂದಿದ್ದರು.

ಇದೇ ವೇಳೆ ಅಹ್ಮದ್ ಶೆಹಝಾದ್ ಭಾರತ ತಂಡ ಸೆಮಿಫೈನಲ್​ನಲ್ಲಿ ಸ್ಥಾನ ಪಡೆಯುವುದು ಖಚಿತ ತಿರುಗೇಟು ನೀಡಿದ್ದರು. ಆದರೆ ವೆಸ್ಟ್ ಇಂಡೀಸ್ ವಿರುದ್ಧ ಭಾರತ ಗೆಲ್ಲುವ ಸಾಧ್ಯತೆಯೇ ಇಲ್ಲ. ಟೀಮ್ ಇಂಡಿಯಾ ಸೋಲಲಿದೆ ಎಂದು ಅಮೀರ್ ಪುನರುಚ್ಚರಿಸಿದರು.

ಈ ವೇಳೆ “ಭಾರತ ಸೋತರೆ ನಾನು ಶೋ ಬಿಡುತ್ತೇನೆ” ಎಂದು ಅಹ್ಮದ್ ಶೆಹಝಾದ್ ಸವಾಲು ಹಾಕಿದ್ದಾರೆ. ಈ ಪಂಥಹ್ವಾನವನ್ನು ಮೊಹಮ್ಮದ್ ಅಮೀರ್ ಸ್ವೀಕರಿಸಿದ್ದಾರೆ.

ಇದೀಗ ವೆಸ್ಟ್ ಇಂಡೀಸ್ ತಂಡವನ್ನು ಬಗ್ಗು ಬಡಿದು ಟೀಮ್ ಇಂಡಿಯಾ ಸೆಮಿಫೈನಲ್​ಗೇರಿದೆ. ಭಾರತ ತಂಡದ ಈ ಗೆಲುವಿನೊಂದಿಗೆ ಅಹ್ಮದ್ ಶೆಹಝಾದ್ ಅಮೀರ್​ ಜೊತೆಗಿನ ಪಂಥಹ್ವಾನದಲ್ಲಿ ಗೆದ್ದಿದ್ದಾರೆ. ಹೀಗಾಗಿ ಅವರು ಶೋ ಬಿಡುವ ಅಗತ್ಯವಿಲ್ಲ.

ಅತ್ತ ಮೊದಲಿಂದಲೂ ಭಾರತ ತಂಡ ಈ ಬಾರಿ ಸೆಮಿಫೈನಲ್​ಗೆ ತಲುಪಲ್ಲ ಎಂದೇಳುತ್ತಾ ಬಂದಿರುವ ಮೊಹಮ್ಮದ್ ಅಮೀರ್ ಇದೀಗ ಮುಖಭಂಗ ಅನುಭವಿಸಿದ್ದಾರೆ. ಅದರಲ್ಲೂ ಶೆಹಝಾದ್ ಜೊತೆ ಪಂಥ ಕಟ್ಟಿ ಇದೀಗ ಸೋತಿದ್ದಾರೆ. ಹೀಗಾಗಿಯೇ ಭಾರತೀಯ ಕ್ರಿಕೆಟ್ ಪ್ರೇಮಿಗಳು ಮೊಹಮ್ಮದ್ ಅಮೀರ್​ ಅನ್ನು ಸೋಷಿಯಲ್ ಮೀಡಿಯಾದಲ್ಲಿ ಟ್ರೋಲ್ ಮಾಡುತ್ತಿದ್ದಾರೆ.

ಇದನ್ನೂ ಓದಿ: T20 World Cup 2026: ಸೆಮಿಫೈನಲ್​ನಲ್ಲಿ 10 ಓವರ್​ಗಳ ನಿಯಮ ಜಾರಿ

ಸದ್ಯ ವೆಸ್ಟ್ ಇಂಡೀಸ್ ವಿರುದ್ಧ ಗೆದ್ದು ಸೆಮಿಫೈನಲ್​ಗೆ ಪ್ರವೇಶಿಸಿರುವ ಟೀಮ್ ಇಂಡಿಯಾ ತನ್ನ ಮುಂದಿನ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು ಎದುರಿಸಲಿದೆ. ಮಾರ್ಚ್ 5 ರಂದು ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆದ್ದರೆ ಫೈನಲ್​ಗೇರಲಿದೆ.

Source link

Leave a Reply

Your email address will not be published. Required fields are marked *