ಇಂದು ಆಷಾಢ ಶುಕ್ರವಾರ, ದಕ್ಷಿಣಾಯನವೂ ಶುರು: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ – Kannada News | Ashada Friday 2026: July 17 Horoscope for All 12 Zodiac Signs, Dakshinayana Begins with Karka Sankranti

ಇಂದು ಜುಲೈ 17, 2026 ರಂದು ಶುಕ್ರವಾರ, ಪರಾಭವನಾಮ ಸಂವತ್ಸರ, ದಕ್ಷಿಣಾಯನ, ಆಷಾಢ ಮಾಸ, ಗ್ರೀಷ್ಮ ಋತು, ಶುಕ್ಲ ಪಕ್ಷ, ತದಿಗೆ ತಿಥಿ, ಆಷಾಢ ಶುಕ್ರವಾರ, ಕಟಕ ಸಂಕ್ರಮಣ ಇದ್ದು, ಅಮ್ಮನ ಆರಾಧನೆಗೆ ಅತ್ಯಂತ ಪ್ರಾಶಸ್ತ್ಯವಾದ ದಿನವಾಗಿದೆ. ಚಾಮುಂಡೇಶ್ವರಿ, ಮಹಾಲಕ್ಷ್ಮಿ ಅಥವಾ ಮಹಾಕಾಳಿ ದೇವಸ್ಥಾನಗಳಲ್ಲಿ ಕುಂಕುಮಾರ್ಚನೆ, ದರ್ಶನ ಮತ್ತು ಪುಷ್ಪ ಸಮರ್ಪಣೆ ಮಾಡುವುದರಿಂದ ತಾಯಿಯ ಪರಿಪೂರ್ಣ ಅನುಗ್ರಹ ಪ್ರಾಪ್ತವಾಗುತ್ತದೆ ಎಂದು ‘ಟಿವಿ9 ಕನ್ನಡ ಡಿಜಿಟಲ್​’ ದಿನ ಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಹಾಗೂ ವಾಸ್ತು ತಜ್ಞ ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ. ಇಂದು ಸೂರ್ಯನು ಕಟಕ ರಾಶಿಗೆ ಪ್ರವೇಶಿಸುತ್ತಾನೆ. ದಕ್ಷಿಣಾಯನವೂ ಸಹ ಇಂದು ಪ್ರಾರಂಭವಾಗುತ್ತದೆ.

ಡಾ. ಬಸವರಾಜ ಗುರೂಜಿ ಅವರು 12 ರಾಶಿಗಳ ಮೇಲೆ ಗ್ರಹಗಳಾದ ರವಿ (ಕರ್ಕಾಟಕದಲ್ಲಿ) ಮತ್ತು ಚಂದ್ರ (ಸಿಂಹ ರಾಶಿಯ ಮಖಾ ನಕ್ಷತ್ರದಲ್ಲಿ) ಸಂಚಾರದ ಪರಿಣಾಮಗಳನ್ನು ವಿವರಿಸಿದ್ದಾರೆ. ಪ್ರತಿಯೊಂದು ರಾಶಿಯವರಿಗೆ ಆರ್ಥಿಕ ಸ್ಥಿತಿ, ವೃತ್ತಿ, ಆರೋಗ್ಯ, ಸಂಬಂಧಗಳು ಮತ್ತು ವೈಯಕ್ತಿಕ ಜೀವನದ ಮೇಲೆ ಆಗುವ ಸಕಾರಾತ್ಮಕ ಮತ್ತು ನಕಾರಾತ್ಮಕ ಪರಿಣಾಮಗಳ ಕುರಿತು ಮಾರ್ಗದರ್ಶನ ನೀಡಿದ್ದಾರೆ.

Source link

Leave a Reply

Your email address will not be published. Required fields are marked *