ದೆಹಲಿ, ಜು.25: NEET ಪರೀಕ್ಷೆ ಪೇಪರ್ ಲೀಕ್ ಹಗರಣ ಖಂಡಿಸಿ ಸಿಜೆಪಿ ಪ್ರತಿಭಟನೆ ಮುಂದುವರೆದಿದ್ದು, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ನೀಡಲಾಗಿದ್ದ ಗಡುವು ಇಂದು ಮಧ್ಯಾಹ್ನ ಅಂತ್ಯಗೊಳ್ಳಲಿದೆ. ಪ್ರಧಾನ್ ರಾಜೀನಾಮೆ ಸೇರಿದಂತೆ ಮೂರು ಬೇಡಿಕೆಗಳನ್ನು ಸಿಜೆಪಿ ಮುಂದಿಟ್ಟಿದ್ದು, ಬೇಡಿಕೆ ಈಡೇರದಿದ್ದಲ್ಲಿ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದೆ. ಈ ಸಂಬಂಧ ಇಂದು ಕೇಂದ್ರ ಸಚಿವರಾದ ಜೆ.ಪಿ. ನಡ್ಡಾ ಮತ್ತು ಜಿತೇಂದ್ರ ಸಿಂಗ್ ನೇತೃತ್ವದಲ್ಲಿ ಸಿಜೆಪಿ ಜೊತೆ ಮೂರನೇ ಸುತ್ತಿನ ಸಭೆ ನಡೆಯಲಿದೆ. ಈಗಾಗಲೇ ನಡೆದ ಎರಡು ಸುತ್ತಿನ ಮಾತುಕತೆಗಳಲ್ಲಿ ಎರಡು ಬೇಡಿಕೆಗಳಿಗೆ ಸಕಾರಾತ್ಮಕ ಸ್ಪಂದನೆ ದೊರೆತಿದ್ದರೂ, ಪ್ರಧಾನ್ ರಾಜೀನಾಮೆ ಕುರಿತು ಸ್ಪಷ್ಟ ನಿರ್ಧಾರ ಹೊರಬಿದ್ದಿಲ್ಲ. ಇಂದಿನ ಸಭೆ ನಿರ್ಣಾಯಕವಾಗಿದ್ದು, ಮಧ್ಯಾಹ್ನ 3:30ಕ್ಕೆ ಡೆಡ್ಲೈನ್ ಅಂತ್ಯವಾಗಲಿದೆ. ಮುಂಜಾಗ್ರತಾ ಕ್ರಮವಾಗಿ ದೆಹಲಿಯಲ್ಲಿ ಹೈ ಅಲರ್ಟ್ ಘೋಷಿಸಲಾಗಿದ್ದು, ಜಂತರ್ ಮಂತರ್ ಸುತ್ತಮುತ್ತ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಸುಮಾರು 18 ಮೆಟ್ರೋ ನಿಲ್ದಾಣಗಳನ್ನು ಮುಚ್ಚಲಾಗಿದ್ದು, ಪ್ರಯಾಣಿಕರ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ. ಕೇಂದ್ರ ಸರ್ಕಾರ ಸಿಜೆಪಿ ಬೇಡಿಕೆಗಳನ್ನು ಈಡೇರಿಸದಿದ್ದರೆ, ಹೋರಾಟ ಜಂತರ್ ಮಂತರ್ಗೆ ಮಾತ್ರ ಸೀಮಿತವಾಗದೆ ದೇಶಾದ್ಯಂತ ತೀವ್ರಗೊಳ್ಳುವ ಮುನ್ಸೂಚನೆ ಇದೆ.
ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
