Headlines

ಇಂದು ಲೋಕಸಭೆಯಲ್ಲಿ 4 ಪ್ರಮುಖ ಮಸೂದೆ ಮಂಡನೆ: ಗೃಹ ಸಚಿವ ಅಮಿತ್ ಶಾ ಎರಡು ಪ್ರಮುಖ ವಿಧೇಯಕ ಮಂಡನೆ – Kannada News | India’s Parliament Debates Major Bills: Tribunal Reforms, Kerala Keralam, Mines, NCDC

ಲೋಕಸಭೆಯಲ್ಲಿ ಇಂದು ನಾಲ್ಕು ಮಸೂದೆ ಮಂಡನೆ

ದೆಹಲಿ, ಆ.10: ಲೋಕಸಭೆಯಲ್ಲಿ ಇಂದು (ಸೋಮವಾರ ಆ.10) ನಾಲ್ಕು ಅತ್ಯಂತ ಪ್ರಮುಖ ವಿಧೇಯಕಗಳನ್ನು (Bills) ಮಂಡಿಸಲು ಕೇಂದ್ರ ಸರ್ಕಾರ ಸಿದ್ಧತೆ ನಡೆಸಿದೆ. ಇವುಗಳಲ್ಲಿ ‘ಟ್ರಿಬ್ಯೂನಲ್ ರಿಫಾರ್ಮ್ಸ್ ಮಸೂದೆ’ ಹಾಗೂ ಕೇರಳ ರಾಜ್ಯದ ಹೆಸರನ್ನು ಅಧಿಕೃತವಾಗಿ ‘ಕೇರಳಂ’ ಎಂದು ಬದಲಾಯಿಸುವ ವಿಧೇಯಕವೂ ಸೇರಿದೆ.

ಲೋಕಸಭೆಯಲ್ಲಿ ಮಂಡನೆಯಾಗಲಿರುವ 4 ಪ್ರಮುಖ ಮಸೂದೆಗಳು:

ಟ್ರಿಬ್ಯೂನಲ್ ರಿಫಾರ್ಮ್ಸ್ ಮಸೂದೆ, 2026, ಈ ಮಸೂದೆಯನ್ನು ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವ ಅರ್ಜುನ್ ರಾಮ್ ಮೇಘವಾಲ್ ಮಂಡಿಸಲಿದ್ದಾರೆ. ಈ ಮಸೂದೆಯಲ್ಲಿ ನ್ಯಾಯಮಂಡಳಿಗಳ (Tribunals) ಕಾರ್ಯವೈಖರಿಯನ್ನು ಸುಧಾರಿಸುವುದು, ಸದಸ್ಯರ ನೇಮಕಾತಿ ಮತ್ತು ಸೇವಾ ನಿಯಮಗಳಲ್ಲಿ ಪಾರದರ್ಶಕತೆ ಹಾಗೂ ಏಕರೂಪತೆಯನ್ನು ತರುವುದು. ರಾಷ್ಟ್ರೀಯ ಟ್ರಿಬ್ಯೂನಲ್ ಆಯೋಗ (National Tribunals Commission) ಸ್ಥಾಪನೆಯ ಪ್ರಸ್ತಾಪವೂ ಇದರಲ್ಲಿದೆ.

ಎರಡನೇ ಮಸೂದೆ, ಕೇರಳ (ಹೆಸರು ಬದಲಾವಣೆ) ಮಸೂದೆ, 2026, ಈ ಮಸೂದೆಯನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಮಂಡಿಸಲಿದ್ದಾರೆ. ಸಂವಿಧಾನದ ಮೊದಲ ಅನುಸೂಚಿಯನ್ನು ತಿದ್ದುಪಡಿ ಮಾಡುವ ಮೂಲಕ ‘ಕೇರಳ’ ರಾಜ್ಯದ ಹೆಸರನ್ನು ಅಧಿಕೃತವಾಗಿ ‘ಕೇರಳಂ’ ಎಂದು ಬದಲಾಯಿಸುವುದು ಇದರ ಉದ್ದೇಶವಾಗಿದೆ.

ಇನ್ನು ಮೂರನೇ ಮಸೂದೆ, ಗಣಿ ಮತ್ತು ಖನಿಜಗಳ (ಅಭಿವೃದ್ಧಿ ಮತ್ತು ನಿಯಂತ್ರಣ) ತಿದ್ದುಪಡಿ ಮಸೂದೆ, 2026, ಈ ಮಸೂದೆಯನ್ನು ಕೇಂದ್ರ ಗಣಿ ಸಚಿವ ಜಿ. ಕಿಶನ್ ರೆಡ್ಡಿ ಮಂಡಿಸಲಿದ್ದಾರೆ. 1957ರ ಗಣಿ ಮತ್ತು ಖನಿಜ ಕಾಯ್ದೆಗೆ ತಿದ್ದುಪಡಿ ತಂದು ಖನಿಜ ವಲಯದ ಅಭಿವೃದ್ಧಿಗೆ ವೇಗ ನೀಡುವುದು ಇದರ ಪ್ರಮುಖ ಉದ್ದೇಶವಾಗಿದೆ.

ಇನ್ನು ನಾಲ್ಕುನೇ ಮಸೂದೆ ರಾಷ್ಟ್ರೀಯ ಸಹಕಾರ ಅಭಿವೃದ್ಧಿ ನಿಗಮ (ತಿದ್ದುಪಡಿ) ಮಸೂದೆ, 2026, ಈ ಮಸೂದೆಯನ್ನು ಕೇಂದ್ರ ಗೃಹ ಹಾಗೂ ಸಹಕಾರ ಸಚಿವ ಅಮಿತ್ ಶಾ ಮಂಡಿಸಲಿದ್ದಾರೆ. 1962ರ ರಾಷ್ಟ್ರೀಯ ಸಹಕಾರ ಅಭಿವೃದ್ಧಿ ನಿಗಮ (NCDC) ಕಾಯ್ದೆಗೆ ತಿದ್ದುಪಡಿ ತರುವುದು ಹಾಗೂ ಸಹಕಾರ ವಲಯದ ಸಾಲ ಸೌಲಭ್ಯಗಳನ್ನು ವಿಸ್ತರಿಸುವುದು ಮುಖ್ಯ ಉದ್ದೇಶವಾಗಿದೆ.

ಇದನ್ನೂ ಓದಿ: 40,000 ಕೋಟಿ ರೂ. ಬ್ಯಾಂಕ್ ವಂಚನೆ ಆರೋಪ! ಆರ್‌ಕಾಮ್ ಮತ್ತು ರಿಲಯನ್ಸ್ ಇನ್ಫ್ರಾ ವಿರುದ್ಧ ಇಡಿ ಚಾರ್ಜ್‌ಶೀಟ್

ಸಂಸದೀಯ ಸ್ಥಾಯಿ ಸಮಿತಿಗಳ ವರದಿ ಸಲ್ಲಿಕೆ:

ಇದೇ ವೇಳೆ ಹಣಕಾಸು, ರೈಲ್ವೆ, ವಸತಿ ಮತ್ತು ನಗರ ವ್ಯವಹಾರಗಳು ಹಾಗೂ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆಗಳಿಗೆ ಸಂಬಂಧಿಸಿದ ಸ್ಥಾಯಿ ಸಮಿತಿಗಳು ತಮ್ಮ ಪ್ರಮುಖ ವರದಿಗಳನ್ನು ಸದನಕ್ಕೆ ಸಲ್ಲಿಸಲಿವೆ. ಡಿಜಿಟಲ್ ಅರ್ಥವ್ಯವಸ್ಥೆಯಲ್ಲಿ ಭಾರತೀಯ ಸ್ಪರ್ಧಾತ್ಮಕ ಆಯೋಗದ (CCI) ಪಾತ್ರ, ರಾಷ್ಟ್ರೀಯ ಸಾಂಖ್ಯಿಕ ಆಯೋಗದ (NSC) ಕಾರ್ಯಕ್ಷಮತೆ ಹಾಗೂ 2026-27ನೇ ಸಾಲಿನ ಅನುದಾನ ಬೇಡಿಕೆಗಳ ಕುರಿತು ವರದಿ ನೀಡಲಿದೆ. ಸರಕು ಸಾಗಣೆ ಆದಾಯ, ಸರಕು ಸಾಗಣೆ ಕಾರಿಡಾರ್‌ಗಳ ಪ್ರಗತಿ ಹಾಗೂ ರೈಲ್ವೆ ಸುರಂಗಗಳು ಮತ್ತು ಸೇತುವೆಗಳ ನಿರ್ವಹಣೆಗೆ ಸಂಬಂಧಿಸಿದ ವರದಿಗಳನ್ನು ಮಂಡಿಸಲಿದೆ.

ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *