ಬೆಂಗಳೂರು, ಜುಲೈ 25: ‘ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿರುವುದು ವಿದ್ಯಾರ್ಥಿಗಳ ಗೆಲುವು. ನಾವು ಕಾಕ್ರೋಚ್ ಪಾರ್ಟಿನೋ, ಇನ್ನೊಂದು ಪಾರ್ಟಿನೋ ಅಲ್ಲ. ವಿದ್ಯಾರ್ಥಿಗಳಿಗೆ ನ್ಯಾಯ ಸಿಗಬೇಕು, ಅವರ ಭವಿಷ್ಯ ಹಾಳು ಮಾಡಬಾರದು’ ಎಂದು ನಾವು ಹೋರಾಟ ಮಾಡಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಹೇಳಿದ್ದಾರೆ. ಪ್ರಧಾನ್ ರಾಜೀನಾಮೆ ಕ್ರೆಡಿಟ್ ವಿಚಾರವಾಗಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ವಿದ್ಯಾರ್ಥಿಗಳು ಪ್ರತಿಭಟನೆ ಮಾಡಿದಾಗ ಅವರನ್ನು ದೇಶದ್ರೋಹಿಗಳು ಎಂದು ಕರೆದರು. ಆದರೆ, ಇಡೀ ಬಿಜೆಪಿ ಮತ್ತು ನಾಗಪುರ್ ಯುನಿವರ್ಸಿಟಿನಲ್ಲಿರುವವರು ನಕಲಿ ದೇಶಭಕ್ತರು’ ಎಂದು ಹರಿಪ್ರಸಾದ್ ತೀವ್ರ ವಾಗ್ದಾಳಿ ಮಾಡಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
