Headlines

ಇದೇ ಕಾರಣಕ್ಕೆ ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದು; ಸೂರತ್​​ನಲ್ಲಿ ಪ್ರಧಾನಿ ಮೋದಿ ವಾಗ್ದಾಳಿ

ಇದೇ ಕಾರಣಕ್ಕೆ ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದು; ಸೂರತ್​​ನಲ್ಲಿ ಪ್ರಧಾನಿ ಮೋದಿ ವಾಗ್ದಾಳಿ

ಸೂರತ್, ಜೂನ್ 5: ಸೂರತ್​ನಲ್ಲಿ ಹಲವು ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ (PM Modi) ಇಂದು ಚಾಲನೆ ನೀಡಿದ್ದಾರೆ. ಈ ವೇಳೆ ಕರ್ನಾಟಕದ ರಾಜಕಾರಣವನ್ನು ಕೂಡ ಪ್ರಸ್ತಾಪಿಸಿದ ಅವರು, “ಕರ್ನಾಟಕದ ಕಾಂಗ್ರೆಸ್ ಸರ್ಕಾರದ ವಿರುದ್ಧ ಅಲ್ಲಿನ ಜನರಲ್ಲಿ ತೀವ್ರ ಅಸಮಾಧಾನವಿದೆ. ಇದೇ ಕಾರಣಕ್ಕೆ ಆ ಪಕ್ಷಕ್ಕೆ ಅಲ್ಲಿ ತನ್ನ ಮುಖ್ಯಮಂತ್ರಿಯನ್ನೇ ಬದಲಾಯಿಸಬೇಕಾಗಿ ಬಂತು” ಎಂದು ಲೇವಡಿ ಮಾಡಿದ್ದಾರೆ.

ಪ್ರಸ್ತುತ ಜಗತ್ತು ಕೋವಿಡ್ ಮಹಾಮಾರಿ, ವಿವಿಧ ದೇಶಗಳ ನಡುವಿನ ಯುದ್ಧಗಳು ಮತ್ತು ತೀವ್ರ ಇಂಧನ ಬಿಕ್ಕಟ್ಟಿನಿಂದಾಗಿ ತತ್ತರಿಸಿದೆ. ಜಾಗತಿಕವಾಗಿ ಪೆಟ್ರೋಲ್-ಗ್ಯಾಸ್ ಬೆಲೆಗಳು ಏರಿಳಿತ ಕಾಣುತ್ತಿವೆ. ಇಂತಹ ಕಠಿಣ ಪರಿಸ್ಥಿತಿಯಲ್ಲೂ 140 ಕೋಟಿ ಭಾರತೀಯರ ಸಾಮೂಹಿಕ ಪ್ರಯತ್ನದಿಂದಾಗಿ ಭಾರತವು ಪ್ರತಿಯೊಂದು ಬಿಕ್ಕಟ್ಟನ್ನು ಧೈರ್ಯದಿಂದ ಎದುರಿಸುತ್ತಿರುವುದು ಹೆಮ್ಮೆಯ ವಿಷಯ ಎಂದು ಅವರು ತಿಳಿಸಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *