ಜೈಪುರ, ಏಪ್ರಿಲ್ 20: ರಾಜಸ್ಥಾನದ ಜನನಿಬಿಡ ಹೆದ್ದಾರಿಯಲ್ಲಿ ನಡೆದ ಘಟನೆಯೊಂದು ರಸ್ತೆ ಸುರಕ್ಷತೆಯ ಬಗ್ಗೆ ಮತ್ತೊಮ್ಮೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ದಿಢೀರನೆ ಹೈವೇಯಲ್ಲಿ ಅಡ್ಡ ಬಂದ ಹಸುವನ್ನು ಕಾಪಾಡಲು ಪ್ರಯತ್ನಿಸಿದ ಕಾರು ಚಾಲಕ ಬ್ರೇಕ್ ಹಾಕಿದ್ದಾನೆ. ಆಗ ಹಿಂದಿನಿಂದ ಬಂದ ಕಾರು ಚಾಲಕ ನಿಯಂತ್ರಣವನ್ನು ಕಳೆದುಕೊಂಡನು. ಆಗ ಆ ಕಾರು ಡಿವೈಡರ್ ಮೇಲೆ ಹಾರಿ ಅಪಘಾತಕ್ಕೀಡಾಗಿದೆ (Accident). ಇದೆಲ್ಲವೂ ಕಣ್ಣುಮುಚ್ಚಿ ಬಿಡುವಷ್ಟರಲ್ಲಿ ನಡೆದಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
