ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ, ಆಗಿದ್ದೇನು? – Kannada News | Handicapped vehicles burnt after fire break out In godown at ramanagara

ಪ್ರಶಾಂತ್​ ಬಿ. | Edited By: ರಮೇಶ್ ಬಿ. ಜವಳಗೇರಾ|

Updated on:Apr 23, 2026 | 10:29 PM

ಇನ್ನೇನು ಸರ್ಕಾರದ ವತಿಯಿಂದ ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮವಾಗಿರುವ ಘಟನೆ ಬೆಂಗಳೂರು ದಕ್ಷಿಣ ‌ಜಿಲ್ಲೆ ರಾಮನಗರದ ವಡೇರಹಳ್ಳಿ ಬಳಿ ನಡೆದಿದೆ. ವಿಶೇಷ ಚೇತನರಿಗೆ ನೀಡಲು ಸರ್ಕಾರದ CSR ಅನುದಾನದಡಿಯಲ್ಲಿ ಟೊಯೋಟಾ ಕಂಪನಿಯ 4 ಚಕ್ರದ 32 ವಾಹನಗಳನ್ನು ಖರೀದಿಸಿ ಭೋಜರಾಜ್ ಎಂಬವರಿಗೆ ಸೇರಿದ ಗೋದಾಮಿನಲ್ಲಿ ಇಡಲಾಗಿತ್ತು. ಆದ್ರೆ, ಇಂದು (ಏಪ್ರಿಲ್ 23) ಏಕಾಏಕಿ ಗೋದಾಮಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, 4 ಚಕ್ರದ 32 ವಾಹನಗಳ ಪೈಕಿ 10 ವಾಹನಗಳು ಸುಟ್ಟು ಭಸ್ಮವಾಗಿವೆ.

Published on: Apr 23, 2026 10:29 PM

Source link

Leave a Reply

Your email address will not be published. Required fields are marked *