
ಬಾಗಲಕೋಟೆ, ಜುಲೈ 19: ಜಿಲ್ಲೆಯ ಇಳಕಲ್ ನಗರದಲ್ಲಿ ನಿನ್ನೆ ರಾತ್ರಿ ಸತತ 6 ರಿಂದ 7 ಗಂಟೆಗಳ ಕಾಲ ಸುರಿದ ಭರ್ಜರಿ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ನಗರದ ಪ್ರಮುಖ ರಸ್ತೆಗಳು ಜಲಾವೃತಗೊಂಡಿದ್ದು, ಸುಮಾರು ಎರಡು ಅಡಿಯಷ್ಟು ನೀರು ನಿಂತಿದ್ದರಿಂದ ಕಾರು ಮತ್ತು ಬೈಕ್ ಸವಾರರು ತೀವ್ರ ಸಂಕಷ್ಟ ಎದುರಿಸಿದರು. ಮಳೆ ನೀರು ಸರಾಗವಾಗಿ ಹರಿದು ಹೋಗದ ಕಾರಣ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿತ್ತು. ಇನ್ನು ಹಲವು ವಸತಿ ಪ್ರದೇಶಗಳಲ್ಲಿ ಮಳೆ ನೀರು ಮನೆಗಳ ಬಾಗಿಲಿಗೆ ಬಂದು ನಿಂತಿದ್ದು, ಸಾರ್ವಜನಿಕರು ಆತಂಕಗೊಂಡಿದ್ದಾರೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ