ಶ್ರೀ ಕೃಷ್ಣ ಮಠದ ಇತಿಹಾಸದಲ್ಲಿದು 253ನೇ ದ್ವೈವಾರ್ಷಿಕ ಪರ್ಯಾಯವಾಗಿದ್ದು, ವೇದವರ್ಧನ ತೀರ್ಥರ ಪ್ರಥಮ ಪರ್ಯಾಯವಾಗಿದೆ. ಮಧ್ಯರಾತ್ರಿ 1.30ಕ್ಕೆ ಕಾಪು ತಾಲೂಕಿನ ದಂಡ ತೀರ್ಥದಲ್ಲಿ ಪವಿತ್ರ ಸ್ನಾನ ನಡೆದು, ಬೆಳಗಿನ ಜಾವ 3 ಗಂಟೆಗೆ ಜೋಡುಕಟ್ಟೆಯಿಂದ ವೈಭವದ ಪರ್ಯಾಯ ಮೆರವಣಿಗೆ ಪ್ರಾರಂಭವಾಗಿದೆ. ನೂರಕ್ಕೂ ಅಧಿಕ ಸಾಂಸ್ಕೃತಿಕ ತಂಡಗಳು, ಟ್ಯಾಬ್ಲೋಗಳು, ಭಜನಾ ತಂಡಗಳು ಈ ವೇಳೆ ಗಮನ ಸೆಳೆದಿವೆ.
