ಉಡುಪಿ, (ಆಗಸ್ಟ್ 07): ಜಿಲ್ಲೆಯ ಮುದರಂಗಡಿ ಪೇಟೆಯಲ್ಲಿರು ಶುಕ್ರವಾರ ಮಧಾಹ್ನ ಶೂಟೌಟ್ ನಡೆದಿದೆ. ಬೈಕ್ನಲ್ಲಿ ಬಂದ ದುಷ್ಕರ್ಮಿಗಳು, ಕಾಂಗ್ರೆಸ್ ಮುಖಂಡನ ಮೇಲೆ ಗುಂಡು ಹಾರಿಸಿದ್ದು, ಉದ್ಯಮಿ ದೇವ ಡೆವಿಡ್ ಡಿಸೋಜ ಸಾವನ್ನಪ್ಪಿದ್ದಾನೆ. ಇನ್ನು ದುಷ್ಕರ್ಮಿಯೋರ್ವ ಗುಂಡಿನ ದಾಳಿ ಮಾಡಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಬೈಕ್ನಲ್ಲಿ ಬಂದಿದ್ದ ಇಬ್ಬರ ಪೈಕಿ ಓರ್ವ ನಡೆದುಕೊಂಡು ಡೆವಿಡ್ ಡಿಸೋಜ ಬಳಿ ಹೋಗಿ ಪಿಸ್ತೂಲ್ನಿಂದ ಮೂರ್ನಾಲ್ಕು ಬಾರಿ ಗುಂಡು ಹಾರಿಸಿದ್ದಾನೆ. ಬಳಿಕ ಬೈಕ್ ಏರಿ ಪರಾರಿಯಾಗಿದ್ದಾನೆ. ಇನ್ನು ಈ ಶೂಟ್ ಔಟ್ ಬಗ್ಗೆ ಎಸ್ಪಿ ಸ್ಫೋಟಕ ಮಾಹಿತಿ ಬಿಚ್ಚಿಟ್ಟಿದ್ದಾರೆ.