
ಮಂಗಳೂರು, (ಮಾರ್ಚ್ 31): ಮದುವೆಯಾದ ಒಂದೇ ತಿಂಗಳಿಗೆ ಪುತ್ತೂರು ತಾಲೂಕಿನ ನೆಲ್ಯಾಡಿ ನಿವಾಸಿ, ಉದ್ಯಮಿ ಸುದೀಪ್ ರೈ ಆತ್ಮಹತ್ಯೆ Sandeep Suicide case) ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ನಾಟಕ ಕಲಾವಿದೆ ಹಾಗೂ ಮೇಕಪ್ ಆರ್ಟಿಸ್ಟ್ ಆಗಿರುವ ಪತ್ನಿ ಸೌಮ್ಯಾಳ ನವರಂಗಿ ಆಟದಿಂದ ಬೇಸತ್ತು ಮದ್ವೆಯಾದ ಒಂದೇ ತಿಂಗಳಲ್ಲಿ ಪತಿ ಸುದೀಪ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನುವ ಶಂಕೆ ವ್ಯಕ್ತವಾಗಿದೆ. ಈ ಪ್ರಕರಣ ಬೆನ್ನಲ್ಲೇ ಸೌಮ್ಯ ಶೆಟ್ಟಿ ಒಂದೊಂದೇ ಕರ್ಮಕಾಂಡಗಳು ಬಯಲಿಗೆ ಬರುತ್ತಿವೆ. ಸೌಮ್ಯ ಶೆಟ್ಟಿ ಸಾಮಾನ್ಯ ಕಲಾವಿದೆ ಅಲ್ಲ. ಆಕೆಗೆ ಈಗಾಗಲೇ ಎರಡು ಮದ್ವೆಯಾಗಿದ್ದು, ಸಂದೀಪ್ನೊಂದಿಗೆ ಮೂರನೇ ಮದ್ವೆ ಎಂದು ತಿಳಿದುಬಂದಿದ್ದು, ಈ ಬಗ್ಗೆ ಸೌಮ್ಯ ಶೆಟ್ಟಿಯ ಮಾಜಿ ಲವರ್, ಸೌಮ್ಯಳ ನವರಂಗಿ ಆಟವನ್ನು ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ.