ಉಪ ಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ‘ಕೈ’ ಅಭ್ಯರ್ಥಿಗಳ ಹೆಸರು ಘೋಷಣೆ

ಉಪ ಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ‘ಕೈ’ ಅಭ್ಯರ್ಥಿಗಳ ಹೆಸರು ಘೋಷಣೆ

ಬೆಂಗಳೂರು, ಮಾರ್ಚ್​​ 22: ಸಾಕಷ್ಟು ಲೆಕ್ಕಾಚಾರಗಳ ಬಳಿಕ ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ಕ್ಷೇತ್ರಗಳಿಗೆ ಕಾಂಗ್ರೆಸ್​​ ಕೊನೆಗೂ ಅಭ್ಯರ್ಥಿಗಳ ಘೋಷಣೆ ಮಾಡಿದೆ. ಬಾಗಲಕೋಟೆಯಿಂದ ಉಮೇಶ್ ಮೇಟಿ ಮತ್ತು ದಾವಣಗೆರೆ ದಕ್ಷಿಣದಿಂದ ಶಾಮನೂರು ಕುಟುಂಬದ ಸಮರ್ಥ್​​ ಅಭ್ಯರ್ಥಿಗಳಾಗಿದ್ದಾರೆ. ಈ ಎರಡೂ ಕ್ಷೇತ್ರಗಳಲ್ಲಿ ಆಕಾಂಕ್ಷಿಗಳ ಸಂಖ್ಯೆ ಬಹಳ ಹೆಚ್ಚಿದ್ದು, ಟಿಕೆಟ್​​ಗಾಗಿ ತೀವ್ರ ಪೈಪೋಟಿ ನಡೆಯುತ್ತಿತ್ತು. ಈ ಹಿನ್ನೆಲೆ ಅಳೆದು ತೂಗಿ, ಕೆಲ ನಾಯಕರ ಮನವೊಲಿಸಿ ಕಾಂಗ್ರೆಸ್​​ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಆ ಮೂಲಕ ಬಾಗಲಕೋಟೆಯಲ್ಲಿ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ್ ಮತ್ತು ಕಾಂಗ್ರೆಸ್​​ನಿಂದ ಉಮೇಶ್ ಮೇಟಿ ನಡುವೆ ಸ್ಪರ್ಧೆ ಏರ್ಪಟ್ಟಿದ್ದರೆ ಇತ್ತ ದಾವಣಗೆರೆ ದಕ್ಷಿಣದಲ್ಲಿ ಬಿಜೆಪಿಯ ಶ್ರೀನಿವಾಸ್ ಟಿ. ದಾಸಕರಿಯಪ್ಪ ವಿರುದ್ಧ ಸಚಿವ ಎಸ್​​.ಎಸ್​​. ಮಲ್ಲಿಕಾರ್ಜುನ್​​ ಅವರ ಪುತ್ರ ಸಮರ್ಥ್​​ ಅಖಾಡಕ್ಕಿಳಿದಿದ್ದಾರೆ.

(ಮಾಹಿತಿ ಅಪ್ಡೇಟ್​​ ಆಗುತ್ತಿದ್ದಿದೆ)

 

 

Source link

Leave a Reply

Your email address will not be published. Required fields are marked *