ನವದೆಹಲಿ, ಫೆಬ್ರವರಿ 21: ನವದೆಹಲಿಯಲ್ಲಿ ನಡೆದ AI ಶೃಂಗಸಭೆಯಲ್ಲಿ ಭಾರತೀಯ ಯುವ ಕಾಂಗ್ರೆಸ್ (IYC) ಕಾರ್ಯಕರ್ತರು ಪ್ರತಿಭಟನೆ ನಡೆಸಿದ ನಂತರ ಇಂದು ಮುಂಬೈನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ (Rahul Gandhi) ಬಿಜೆಪಿ ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶಿಸಿದರು. ರಸ್ತೆಯ ಬದಿ ನಿಂತಿದ್ದ ಬಿಜೆಪಿ ಕಾರ್ಯಕರ್ತರು ರಾಹುಲ್ ಗಾಂಧಿಯ ಕಾರು ಬರುತ್ತಿದ್ದಂತೆ ಕಪ್ಪು ಬಾವುಟ ತೋರುತ್ತಾ ಅವರ ವಿರುದ್ಧ ಘೋಷಣೆ ಕೂಗಿದರು.
2014ರ RSS ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭಿವಂಡಿ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯದ ಮುಂದೆ ಹಾಜರಾಗಲು ಲೋಕಸಭೆಯ ವಿರೋಧ ಪಕ್ಷದ ನಾಯಕ ಇಂದು ಮುಂಬೈಗೆ ತೆರಳಿದ್ದರು.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ