ಬೆಂಗಳೂರು, ಜನವರಿ 10: ಇಂದಿರಾನಗರದಲ್ಲಿ ಕಾರು ಅಪಘಾತ ಸಂಭವಿಸಿದ್ದು, ಕೂದಲೆಳೆ ಅಂತರದಲ್ಲಿ 8 ಜನರು ಪಾರಾಗಿದ್ದಾರೆ. ಗುರುವಾರ ರಾತ್ರಿ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮದ್ಯಪಾನ ಮಾಡಿ ಚಾಲಕ ಕಾರು ಚಲಾಯಿಸಿದ್ದಾನೆ. ಎಡಕ್ಕೆ ತಿರುಗಿಸದೇ ನೇರವಾಗಿ ಡಿವೈಡರ್ರನ್ನು ಹಾರಿಸುವ ಮೂಲಕ ಹೋಟೆಲ್ಗೆ ಡಿಕ್ಕಿ ಹೊಡೆದಿದೆ. ಕಾರು ಡಿವೈಡರ್ ಹಾರಿ ತಮ್ಮೆಡೆಗೆ ಬರುತ್ತಿರುವುದನ್ನ ಕಂಡ ಯುವಕ-ಯುವತಿಯರ ತಂಡ ಸೇರಿದಂತೆ ಇಬ್ಬರು ಬೈಕ್ ಚಾಲಕರು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಜೀವನ್ ಭೀಮಾನಗರ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆಯ ಭಯಾನಕ ದೃಶ್ಯ ಸಿಸಿಟಿಯಲ್ಲಿ ಸೆರೆಯಾಗಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
