ಬೆಂಗಳೂರು, ಫೆಬ್ರವರಿ 18: ಶಾಸಕರ ವಿದೇಶ ಪ್ರವಾಸದೊಂದಿಗೆ ಕರ್ನಾಟಕ ಕಾಂಗ್ರೆಸ್ನಲ್ಲಿ ಅಧಿಕಾರ ಹಂಚಿಕೆ ಚರ್ಚೆ ಮತ್ತೆ ತೀವ್ರಗೊಂಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ನಡುವಣ ಮುಸುಕಿನ ರಾಜಕೀಯ ತಿಕ್ಕಾಟ ತೀವ್ರಗೊಂಡಿದೆ. ಡಿಕೆ ಶಿವಕುಮಾರ್ ಅವರು ಪದೇ ಪದೇ ಅಧಿಕಾರ ಹಂಚಿಕೆ ಕುರಿತು ಆದ ಒಪ್ಪಂದವನ್ನು ನೆನಪಿಸುತ್ತಿದ್ದು, ಸೂಕ್ತ ಸಮಯ ಬಂದಾಗ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಜನರಿಗೆ ಉತ್ತರ ನೀಡುತ್ತಾರೆ ಎಂದು ಹೇಳಿದ್ದಾರೆ.
ಈ ನಡುವೆ, ಸಚಿವ ಹೆಚ್ಸಿ ಮಹದೇವಪ್ಪ ‘ಬೀದಿ ನಾಯಿ’ ಪದ ಬಳಸಿದ್ದಕ್ಕೆ ಡಿಕೆ ಸುರೇಶ್ ಕೌಂಟರ್ ಕೊಟ್ಟಿದ್ದಾರೆ. ಕಟ್ಟಾ ಕಾಂಗ್ರೆಸ್ಸಿಗರು ನಿಯತ್ತಿನ ನಾಯಿಗಳು ಎಂದು ಡಿಕೆ ಸುರೇಶ್ ತಿರುಗೇಟು ನೀಡಿದ್ದಾರೆ.