ಬೆಂಗಳೂರು, (ಆಗಸ್ಟ್ 02): ಬೆಂಗಳೂರಿನಲ್ಲಿ ಕುಡಿಯುವ ನೀರು ಹದಗೆಡುತ್ತಿರುವ ಹಿನ್ನೆಲೆ ನಾನಾ ರೀತಿ ಆರೋಗ್ಯ ಸಮಸ್ಯೆಗಳಿಗೆ ಜನರು ತುತ್ತಾಗುತ್ತಿದ್ದಾರೆ. ಹೀಗಾಗಿ ಸಾರ್ವಜನಿಕ ಪ್ರದೇಶಗಳಲ್ಲಿ ಜನರ ಆರೋಗ್ಯ ಕಾಪಾಡಲು ಎಲ್ಲಾ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಕುಡಿಯಲು ಬಿಸಿ ನೀರನ್ನ (Hot Water) ಕೊಡೋದು ಕಡ್ಡಾಯ ಎಂಬ ನಿಯಮ ತರಲು ಆರೋಗ್ಯ ಇಲಾಖೆ ಮುಂದಾಗಿದೆ. ಸದ್ಯ ಎಲ್ಲಾ ಪ್ರೀಮಿಯಮ್ ಹಾಗೂ ಸ್ಟ್ಯಾಂಡರ್ಡ್ ಹೋಟೆಲ್ಗಳಲ್ಲಿ ಕುಡಿಯಲು ಬಿಸಿ ನೀರಿನ ವ್ಯವಸ್ಥೆ ಇದೆ. ಇದನ್ನ ಎಲ್ಲಾ ರೀತಿಯ ಅಂದರೆ, ಸಣ್ಣ-ಪುಟ್ಟ ಹೋಟೆಲ್ಗಳಲ್ಲೂ ಕಡ್ಡಾಯ ಮಾಡಬೇಕಿದೆ ಎನ್ನುವುದು ಆರೋಗ್ಯ ಸಚಿವ ಯುಟಿ ಖಾದರ್ ಅವರ ಮಾತು. ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ಹೋಟೆಲ್ ಮಾಲೀಕರು ಒಳ್ಳೆಯ ನಿರ್ಧಾರ ಎಂದಿದ್ದಾರೆ. ಇತ್ತ ಗ್ರಾಹಕರು ಕೂಡ ಈ ನಿರ್ಧಾರವನ್ನ ಸ್ವಾಗತ ಮಾಡಿದ್ದಾರೆ.
ವಿದ್ಯಾರ್ಥಿಗಳ ಆರೋಗ್ಯದ ಹಿತ ದೃಷ್ಟಿಯಿಂದ ಶಾಲೆಗಳ ಸುತ್ತಮುತ್ತ ಜಂಕ್ ಫುಡ್ ಮಾರಾಟವನ್ನು ನಿಷೇಧಿಸಿ ಆರೋಗ್ಯ ಇಲಾಖೆ ಆದೇಶಿತ್ತು. ಇದರ ಬೆನ್ನಲ್ಲೇ ಇದೀಗ ಸಚಿವ ಯುಟಿ ಖಾದರ್ ಮತ್ತೊಂದು ಮಹತ್ವದ ತಿರ್ಮಾನ ಕೈಗೊಂಡಿದ್ದಾರೆ. ಕಲುಷಿತ ನೀರಿನ ಸೇವನೆಯಿಂದಾಗಿ ನಾನಾ ರೀತಿಯ ಖಾಯಿಲೆಗಳಿಗೆ ಜನಸಾಮಾನ್ಯು ತುತ್ತಾಗುತ್ತಿದ್ದಾರೆ. ಹೀಗಾಗಿ ಇದಕ್ಕೆಲ್ಲಾ ಕಡಿವಾಣ ಹಾಕಲು ನಿರ್ಧರಿಸಿರುವ ಆರೋಗ್ಯ ಎಲ್ಲಾ ರೀತಿಯ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಕುಡಿಯಲು ಬಿಸಿ ನೀರನ್ನ ಕೊಡುವುದು ಕಡ್ಡಾಯ ಮಾಡುತ್ತಿದೆ.
ಇದನ್ನೂ ಓದಿ: ಕರ್ನಾಟಕದಲ್ಲಿ ಶಾಲಾ-ಕಾಲೇಜುಗಳ ಸುತ್ತಮುತ್ತ ಜಂಕ್ ಫುಡ್ ನಿಷೇಧ: ಉದ್ದೇಶವೇನು?
ಈಗಾಗಲೇ ಕೆಲ ಹೋಟೆಗಳಲ್ಲಿ ಗ್ರಾಹಕರಿಗಾಗಿ ಬಿಸಿ ನೀರು ನೀಡಲಾಗುತ್ತಿದೆ. ಆದ್ರೆ, ಇದನ್ನು ಎಲ್ಲಾ ಹೋಟೆಗಳಲ್ಲಿ ಕಡ್ಡಾಯಗೊಳಿಸಲು ಆರೋಗ್ಯ ಇಲಾಖೆ ತೀರ್ಮಾನಿಸಿದ್ದು, ಜನಸಾಮನ್ಯರ ಆರೋಗ್ಯದ ದೃಷ್ಟಿಯಿಂದ ಒಳ್ಳೆಯ ನಿರ್ಧಾರ. ಆದ್ರೆ, ಇದನ್ನು ಹೋಟೆಲ್ನವರು ಎಷ್ಟರ ಮಟ್ಟಿಗೆ ಪಾಲನೆ ಮಾಡುತ್ತಾರೆ ಎನ್ನುವುದು ಮುಂದಿರುವ ಪ್ರಶ್ನೆ.
ಒಟ್ಟಾರೆ ಗ್ಯಾಸ್ ಕೊರತೆಯ ಹಿನ್ನೆಲೆ ಒಂದಷ್ಟು ಹೋಟೆಲ್ಗಳಲ್ಲಿ ಇನ್ಮುಂದೆ ಕುಡಿಯಲು ಬಿಸಿ ನೀರು ಇಲ್ಲ ಎನ್ನುವಂತಿಲ್ಲ. ಅಗತ್ಯ ಇರುವ ಎಲ್ಲಾ ಗ್ರಾಹಕರಿಗೂ ಕುಡಿಯುವ ಬಿಸಿ ನೀರು ಸಿಗಲಿ.