ಚಿಕ್ಕಮಗಳೂರು, ಮೇ 29: ಜಿಲ್ಲೆಯಲ್ಲಿ ಕಾಡಾನೆ ಉಪಟಳ ಮುಂದುವರಿದಿದ್ದು, ಕಡವಂತಿಯ ವಡ್ಡಿಗುಡ್ಡ ಎಸ್ಟೇಟ್ನಲ್ಲಿ ಗಜಪಡೆ ಪ್ರತ್ಯಕ್ಷವಾಗಿದೆ. ಕಡವಂತಿ, ಬಿಳಗೊಳ, ಹ್ಯಾರಂಬಿಪುರ, ಪುರ, ಮಲ್ಲಿಗೆಖಾನ್, ಬೇರಣಗೋಡು ಸುತ್ತಮುತ್ತವೇ ಕಾಡಾನೆಗಳು ಸಂಚಾರ ಮಾಡುತ್ತಿದ್ದು, ಇವುಗಳ ಹಾವಳಿ ತಡೆಗಟ್ಟುವಂತೆ ಸ್ಥಳೀಯ ನಿವಾಸಿಗಳು ಅರಣ್ಯ ಇಲಾಖೆಯನ್ನು ಒತ್ತಾಯಿಸಿದ್ದಾರೆ. ಬಾಳೆಹೊನ್ನೂರು ವಲಯ ಅರಣ್ಯ ವ್ಯಾಪ್ತಿಯಲ್ಲಿ ಆನೆಗಳು ಜನವಸತಿ ಪ್ರದೇಶಗಳ ಸಮೀಪವೇ ಪ್ರತ್ಯಕ್ಷವಾಗ್ತಿರೋದು ಸಾರ್ವಜನಿಕರ ಆತಂಕ ಹೆಚ್ಚಿಸಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.