ಬೆಂಗಳೂರು, ಜುಲೈ 12: ಹಿರಿಯ ಗಾಯಕಿ ಎಸ್. ಜಾನಕಿ ಅವರ ನಿಧನಕ್ಕೆ ಸಂಗೀತ ನಿರ್ದೇಶಕ ಇಳಯರಾಜ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಲಂಡನ್ನಿಂದ ವೀಡಿಯೊ ಮೂಲಕ ಇಳಯರಾಜ್, ಜಾನಕಿ ಅಮ್ಮ ಅವರ ನಿಧನದ ಸುದ್ದಿ ಕೇಳಿ ತಮಗೆ ಅತ್ಯಂತ ದುಃಖ ಮತ್ತು ಆಘಾತವಾಗಿದೆ ಎಂದು ಹೇಳಿದ್ದಾರೆ. ಜೀವನದಲ್ಲಿ ಅಸಹನೀಯ ದುಃಖಗಳನ್ನು, ಸಹಿಸಲಾಗದ ಘಟನೆಗಳನ್ನು ಸಹಿಸಿಕೊಂಡು ಅವರು ಬದುಕಿದರು ಎಂಬುದು ಅತ್ಯಂತ ವೇದನೆಯ ವಿಷಯ ಎಂದು ಇಳಯರಾಜ್ ಸ್ಮರಿಸಿದ್ದಾರೆ. ತಮ್ಮ ಪ್ರತಿಭೆಯಲ್ಲಿ ಯಾರಿಗೂ ಕಡಿಮೆ ಇಲ್ಲ ಎಂಬುದನ್ನು ಜಾನಕಿ ಅಮ್ಮ ತಮ್ಮ ಪ್ರತಿಯೊಂದು ಹಾಡಿನಲ್ಲೂ ನಿರೂಪಿಸುತ್ತಲೇ ಬಂದಿದ್ದಾರೆ. ಅವರು ಅತ್ಯಂತ ಕಠಿಣ ಪರಿಶ್ರಮಿ. ಜಾನಕಿ ಅವರ ಅಗಲಿಕೆ ಭಾರತೀಯ ಚಲನಚಿತ್ರ ಸಂಗೀತ ಲೋಕಕ್ಕೆ ಒಂದು ದೊಡ್ಡ ನಷ್ಟ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ದೇವರಲ್ಲಿ ಪ್ರಾರ್ಥಿಸೋದಾಗಿ ಅವರು ತಿಳಿಸಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
