Headlines

ಏಕಾಏಕಿ ಕುಸಿದು ಬಿದ್ದು ಬಾಡಿ ಬಿಲ್ಡರ್ ಸಾವು: ಹೆತ್ತ ತಾಯಿ ಕಣ್ಣೆದುರೇ ಮಗನ ದುರಂತ ಅಂತ್ಯ! – Kannada News | Bodybuilder Dies After Suddenly Collapsing; Son Passes Away Before Mother’s Eyes

ದಾವಣಗೆರೆ, ಜೂನ್​ 17: ರಾಷ್ಟ್ರ ಮಟ್ಟದಲ್ಲಿ ನೂರಾರು ಪ್ರಶಸ್ತಿಗಳನ್ನು ಗೆದ್ದು ಹೆಸರು ಮಾಡಿದ್ದ 26 ವರ್ಷದ ಯುವ ಬಾಡಿ ಬಿಲ್ಡರ್ (Bodybuilder) ಜಿಮ್​ನಿಂದ ಮನೆಗೆ ಬಂದ ಕೆಲ ಹೊತ್ತಲ್ಲೇ ದಿಢೀರ್​ ಕುಸಿದು ಬಿದ್ದು ಹೃದಯಾಘಾತದಿಂದ (heart attack) ಸಾವನ್ನಪ್ಪಿರುವಂತಹ ಆತಂಕಕಾರಿ ಘಟನೆ ದಾವಣಗೆರೆಯ ಕೆಟಿಜೆ ನಗರದಲ್ಲಿ ನಡೆದಿದೆ. ಸುಶೀಲಕುಮಾರ್​ ಮೃತ ಬಾಡಿ ಬಿಲ್ಡರ್​. ಸುಶೀಲಕುಮಾರ್​​ ಸಾವು ಸ್ನೇಹಿತರಿಗೆ ಅಚ್ಚರಿ​ ಮೂಡಿಸಿದೆ. ಕುಟುಂಬಸ್ಥರ ಮುಗಿಲು ಆಕ್ರಂದನ ಮುಟ್ಟಿದೆ.

ಮುಖ್ಯಾಂಶಗಳು

  • ರಾಜ್ಯ, ರಾಷ್ಟ್ರ ಪ್ರಶಸ್ತಿ ವಿಜೇತ ಯುವಕ ಹೃದಯಾಘಾತದಿಂದ ಸಾವು
  • ಕುಟುಂಬಸ್ಥರು, ಸ್ನೇಹಿತರಿಗೆ ಅಚ್ಚರಿ ಮೂಡಿಸಿದ ಬಾಡಿ ಬಿಲ್ಡರ್ ಸಾವು
  • ಮುಗಿಲು ಮುಟ್ಟಿದ ಕುಟುಂಬ ಸದಸ್ಯರ ಆಕ್ರಂದನ

ನಡೆದಿದ್ದೇನು?

ಬೆಳಿಗ್ಗೆ ಜಿಮ್‌ನಲ್ಲಿ ವರ್ಕೌಟ್ ಮುಗಿಸಿ ಬಂದಿದ್ದ ಸುಶೀಲಕುಮಾರ್, ಸಂಜೆ ಎಂದಿನಂತೆ ಜಿಮ್‌ಗೆ ಹೊರಡಲು ಸಿದ್ಧರಾಗಿದ್ದರು. ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ಸಿಬ್ಬಂದಿಯಾಗಿರುವ ತಾಯಿಯನ್ನ ಕೆಲಸಕ್ಕೆ ಬಿಡಲು ಮುಂದಾಗಿದ್ದಾರೆ. ಈ ವೇಳೆ ಇದ್ದಕ್ಕಿದ್ದಂತೆ ತಲೆಸುತ್ತು ಬಂದಿದೆ. ಬಿಪಿ ಲೋ ಆಗಿರುವುದು ಕಂಡುಬಂದಿದೆ. ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲೇ ಸುಶೀಲಕುಮಾರ್ ಕೊನೆಯುಸಿರೆಳೆದಿದ್ದಾರೆ. ಹೆತ್ತ ತಾಯಿಯ ಕಣ್ಣೆದುರೇ ಮಗನ ಜೀವ ಹೋಗಿರುವುದು ಮಾತ್ರ ಎಂಥವರಿಗಾದರೂ ಕಣ್ಣೀರು ಬರುತ್ತವೆ.

ಇದನ್ನೂ ಓದಿ: ಕರ್ನಾಟಕದಲ್ಲಿ ಮುಂದುವರೆದ ಹೃದಯಾಘಾತ: ಇಂದು ಒಂದೇ ದಿನ 8 ಜನ ಸಾವು

ಸುಶೀಲಕುಮಾರ್​ಗೆ ಯಾವುದೇ ಒಂದು ಕೆಟ್ಟ ಹವ್ಯಾಸಗಳಿರಲಿಲ್ಲ. ಕಠಿಣ ಪರಿಶ್ರಮವನ್ನೇ ನಂಬಿದ್ದರು. ರಾಜ್ಯ, ರಾಷ್ಟ್ರೀಯ ಸ್ಪರ್ಧೆಗಳಲ್ಲಿ ನೂರಾರು ಪ್ರಶಸ್ತಿಗಳನ್ನು ಗೆದ್ದಿದ್ದರು. ದಿನಕ್ಕೆ ಎರಡು ಸಲ ಜಿಮ್​ಗೆ ಹೋಗುತ್ತಿದ್ದರು. ತನ್ನ ಬಳಿ ತರಬೇತಿ ಪಡೆಯಲು ಬರುತ್ತಿದ್ದ ಯುವಕರಿಗೆ ಶಿಸ್ತಿನ ಪಾಠ ಮಾಡುತ್ತಿದ್ದರು. ದಾವಣಗೆರೆಯಲ್ಲಿ ಹೆಸರು ಮಾಡಿದ್ದ ಯುವಕ ಇಂದು ನೋಡುನೋಡುತ್ತಿದಂತೆ ಇಲ್ಲವಾಗಿರುವುದು ದುರದೃಷ್ಟಕರ.

ಇನ್ನು ಸುಶೀಲಕುಮಾರ್​ಗೆ ತಾಯಿ ಎಂದರೆ ಬಹಳ ಇಷ್ಟ. ಅವರ ಇನ್ಸ್ಟಾಗ್ರಾಂ ಖಾತೆಯಲ್ಲಿ ತಾಯಿ ಬಗ್ಗೆ ಅಪಾರ ಪ್ರೀತಿ ತೋರುವ ನೂರಾರು ವಿಡಿಯೋಗಳು ಇವೆ. ಆದರೆ ಎದೆಯೆತ್ತರಕ್ಕೆ ಬೆಳೆದ ಮಗ ತಮ್ಮ ಕಣ್ಣ ಮುಂದೆ ಸಾವನ್ನಪ್ಪಿರುವುದು ಕಂಡು ತಾಯಿ ಕಂಗಾಲಾಗಿದ್ದಾರೆ.

ಇದನ್ನೂ ಓದಿ: ಹಾಸನದ ಹೃದಯಾಘಾತದ ಪ್ರಾಥಮಿಕ ವರದಿ ಸಿದ್ಧ: ಇದುವೇ ಮುಖ್ಯ ಕಾರಣ ಅಂತಿದ್ದಾರೆ ತಜ್ಞರು!

ಇತ್ತೀಚಿನ ದಿನಗಳಲ್ಲಿ ಯುವಕರು ಹೀಗೆ ಇದ್ದಕ್ಕಿದ್ದಂತೆ ಕುಸಿದು ಬಿದ್ದು ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚುತ್ತಿವೆ. ಇತ್ತೀಚೆಗಷ್ಟೇ ಜಗಳೂರಿನಲ್ಲಿ 9 ವರ್ಷದ ಶಾಲಾ ಬಾಲಕನೊಬ್ಬ ಹೃದಯಾಘಾತದಿಂದ ಮೃತಪಟ್ಟಿದ್ದ. ಸುಶೀಲಕುಮಾರ್ ಅವರಂತಹ ಸದೃಢ ಯುವಕರ ಸಾವಿಗೆ ನಿಖರ ಕಾರಣ ಏನೆಂಬುದನ್ನು ಗಂಭೀರವಾಗಿ ಪರಿಗಣಿಸಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On – 4:09 pm, Wed, 17 June 26

Source link

Leave a Reply

Your email address will not be published. Required fields are marked *