ಬೆಂಗಳೂರು, ಜುಲೈ 19: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮನವರ ಅಂತಿಮ ದರ್ಶನಕ್ಕೆ ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿ ಸಿದ್ಧತೆಗಳು ನಡೆಯುತ್ತಿವೆ. ಈ ಸಂದರ್ಭದಲ್ಲಿ ಅವರ ಪುತ್ರಿ ಅನುಸೂಯಾ ಅವರು ತಮ್ಮ ತಾಯಿಯ ಅಂತಿಮ ಕ್ಷಣಗಳನ್ನು ಭಾವುಕವಾಗಿ ಹಂಚಿಕೊಂಡಿದ್ದಾರೆ. ನಮ್ಮ ತಾಯಿ ದೈಹಿಕವಾಗಿ ನಮ್ಮೊಂದಿಗೆ ಇಲ್ಲದಿದ್ದರೂ, ಅವರ ಶಕ್ತಿ ನಮ್ಮೆಲ್ಲರಲ್ಲೂ ಜೀವಂತವಾಗಿದೆ. ಯಾವುದೇ ಹೆಣ್ಣುಮಗಳು ಮುತ್ತೈದೆಯಾಗಿ ಸಾಯಬೇಕು ಎಂದು ಬಯಸುತ್ತಾರೆ. ನನ್ನ ತಾಯಿಗೆ ಆ ಭಾಗ್ಯ ಸಿಕ್ಕಿದೆ. ನಮ್ಮ ತಂದೆಯವರು ಬೆಳಗ್ಗೆ ಶಿವನಿಗೆ ರುದ್ರಾಭಿಷೇಕ ಮಾಡಿದ ತೀರ್ಥ, ಗಂಧ ಮತ್ತು ದೇವರ ಮಲ್ಲಿಗೆ ಹೂವನ್ನು ಕೈಯಾರೆ ತಾಯಿಗೆ ನೀಡಿದ್ದಾರೆ. ಅದೇ ಕ್ಷಣ ಅವರ ಜೀವ ಹೋಗಿದೆ. ಇಂತಹ ಸಾವು ಯಾರಿಗೂ ಸಿಗುವುದಿಲ್ಲ ಎಂದು ಹೇಳುತ್ತಲೇ ಅವರು ಕಣ್ಣೀರಾಗಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.