ಒಂದು ಗಿಡಕ್ಕೆ 3,300 ರೂ., ಗುಂಡಿ ತೋಡಲು 300 ರೂ.!: ನೀವು ಹಣ ದುರ್ಬಳಕೆ ಮಾಡ್ತಿದ್ದೀರಾ? ಬಿಬಿಎಂಪಿ ಅಧಿಕಾರಿಗಳ ಬೆವರಿಳಿಸಿದ ಕೃಷ್ಣಭೈರೇಗೌಡ – Kannada News | Bengalurus Tree Planting Scandal: Officials Silent as Minister Krishna Byregowda Demands Answers on Inflated Costs

ಬೆಂಗಳೂರು, ಜೂ.30: ನಗರಾಭಿವೃದ್ಧಿ ಸಚಿವ ಕೃಷ್ಣಭೈರೇಗೌಡರು, ಬಿಬಿಎಂಪಿ ಅಧಿಕಾರಿಗಳು ಗಿಡ ನೆಡುವ ಕಾರ್ಯಕ್ರಮದಲ್ಲಿ ಅತಿಯಾದ ವೆಚ್ಚ ಮತ್ತು ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆಂದು ಗಂಭೀರ ಆರೋಪ ಮಾಡಿದ್ದಾರೆ. ಇತ್ತೀಚೆಗೆ ನಡೆದ ಸಭೆಯಲ್ಲಿ ಸಚಿವರು, ಬಿಬಿಎಂಪಿ ವತಿಯಿಂದ ಒಂದು ಗಿಡ ನೆಡಲು 3,300 ರೂ. ಖರ್ಚು ಮಾಡಲಾಗುತ್ತಿದೆ ಎಂದು ತಿಳಿಸಿದ್ದು, ಅದರಲ್ಲಿ ಗುಂಡಿ ತೋಡಲು 300 ರೂ. ಮೀಸಲಿಡಲಾಗಿದೆ ಎಂದು ಹೇಳಿದ್ದಾರೆ. ಆದರೆ, ತಮ್ಮ ಕ್ಷೇತ್ರದಲ್ಲಿ ನೆಡಲಾದ ಯಾವ ಗಿಡಕ್ಕೂ ಸರಿಯಾದ ಗುಂಡಿ ತೋಡಿಲ್ಲ ಎಂದು ಸಚಿವರು ಅಧಿಕಾರಿಗಳಿಗೆ ಸವಾಲು ಹಾಕಿದ್ದಾರೆ. ಫುಟ್‌ಪಾತ್ ಅಥವಾ ಮೀಡಿಯನ್‌ಗಳಲ್ಲಿ ಮೇಲ್ನೋಟಕ್ಕೆ ಗಿಡಗಳನ್ನು ಇರಿಸಲಾಗಿದೆಯೇ ಹೊರತು, ನಿಯಮದ ಪ್ರಕಾರ ಗುಂಡಿಗಳನ್ನು ತೋಡಿಲ್ಲ ಎಂದು ಆರೋಪಿಸಿದರು. ಗುಂಡಿ ತೋಡಲು ಮೀಸಲಿಟ್ಟ 300 ರೂ. ಹಣವನ್ನು ಅಧಿಕಾರಿಗಳು ನೇರವಾಗಿ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು. ಕಳೆದ 20 ವರ್ಷಗಳಲ್ಲಿ ಬಿಬಿಎಂಪಿ (ಹಿಂದಿನ ಬಿಎಂಪಿ ಸೇರಿದಂತೆ) ಎಷ್ಟು ಗಿಡಗಳನ್ನು ನೆಟ್ಟಿದೆ, ಮರಗಣತಿ (Tree Census) ಎಷ್ಟು ವರ್ಷಗಳಿಗೊಮ್ಮೆ ನಡೆಯುತ್ತದೆ ಮತ್ತು ನೆಟ್ಟ ಗಿಡಗಳು ಮರಗಣತಿಯಲ್ಲಿ ಪ್ರತಿಫಲಿಸುತ್ತಿವೆಯೇ ಎಂದು ಸಚಿವರು ಪ್ರಶ್ನಿಸಿದರು. ಈ ಎಲ್ಲಾ ಪ್ರಶ್ನೆಗಳಿಗೆ ಅಧಿಕಾರಿಗಳು ಸಮರ್ಪಕ ಉತ್ತರ ನೀಡಲು ವಿಫಲರಾದರು. ಸಾರ್ವಜನಿಕ ಹಣದ ಪೋಲು ಮತ್ತು ನಿರ್ಲಕ್ಷ್ಯದ ಬಗ್ಗೆ ಸಚಿವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಈ ವಿಚಾರವಾಗಿ ಹೆಚ್ಚಿನ ಪಾರದರ್ಶಕತೆ ಮತ್ತು ಹೊಣೆಗಾರಿಕೆಯನ್ನು ಆಗ್ರಹಿಸಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *