ನವದೆಹಲಿ, ಜನವರಿ 10: ಒಡಿಶಾದ (Odisha) ರೂರ್ಕೆಲಾ ವಾಯುನೆಲೆಯಿಂದ 9 ಕಿಲೋಮೀಟರ್ ದೂರದಲ್ಲಿ ಸಣ್ಣ ವಿಮಾನವೊಂದರಲ್ಲಿ ಹಾರಾಟದ ವೇಳೆ ತಾಂತ್ರಿಕ ದೋಷ ಕಂಡುಬಂದ ನಂತರ ತುರ್ತು ಭೂಸ್ಪರ್ಶ ಮಾಡಿದೆ. ಈ ಘಟನೆಯಲ್ಲಿ ಪೈಲಟ್ ಸೇರಿದಂತೆ 6 ಜನರು ಗಾಯಗೊಂಡಿದ್ದಾರೆ. ಭುವನೇಶ್ವರದಿಂದ ರೂರ್ಕೆಲಾಗೆ ಹಾರುತ್ತಿದ್ದ 9 ಆಸನಗಳ ವಿಮಾನ ಇದಾಗಿತ್ತು. ಈ ವಿಮಾನದಲ್ಲಿ 4 ಪ್ರಯಾಣಿಕರು ಮತ್ತು ಇಬ್ಬರು ಸಿಬ್ಬಂದಿ ಇದ್ದರು. ಅವರನ್ನು ಕ್ಯಾಪ್ಟನ್ ನವೀನ್ ಕಡಂಗ ಮತ್ತು ಕ್ಯಾಪ್ಟನ್ ತರುಣ್ ಶ್ರೀವಾಸ್ತವ ಎಂದು ಗುರುತಿಸಲಾಗಿದೆ. ಅವರೆಲ್ಲರಿಗೂ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ