Headlines

ಒಮಾನ್​ನಲ್ಲಿ ಅಮೆರಿಕದ ದಾಳಿಗೆ ಬಲಿಯಾಗಿದ್ದ ಇಬ್ಬರು ಭಾರತೀಯ ನಾವಿಕರ ಶವಗಳು ಭಾರತಕ್ಕೆ ರವಾನೆ – Kannada News | Bodies of 2 Indian sailors killed in Oman after US attack brought home

ನವದೆಹಲಿ, ಜೂನ್ 17: ಒಮಾನ್ ಕೊಲ್ಲಿಯಲ್ಲಿ ಎಂಟಿ ಸೆಟೆಬೆಲೊ ವ್ಯಾಪಾರಿ ಹಡಗಿನ ಮೇಲೆ ಅಮೆರಿಕ ನಡೆಸಿದ ದಾಳಿಯಲ್ಲಿ ಮೃತಪಟ್ಟ ಇಬ್ಬರು ಭಾರತೀಯ ನಾವಿಕರ ಶವಗಳನ್ನು ಭಾರತಕ್ಕೆ ತರಲಾಗಿದೆ. ಅಮೆರಿಕದ ದಾಳಿಗಳಲ್ಲಿ ಮೂವರು ಭಾರತೀಯರು ಸಾವನ್ನಪ್ಪಿದ್ದು, ರಾಜತಾಂತ್ರಿಕ ಕಳವಳಗಳನ್ನು ಹುಟ್ಟುಹಾಕಿದೆ ಮತ್ತು ಸಂಘರ್ಷ ವಲಯಗಳಲ್ಲಿ ನಾಗರಿಕ ಹಡಗುಗಳ ಸುರಕ್ಷತೆಯ ಬಗ್ಗೆ ಹೊಸ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಕಳೆದ ವಾರ ಪಶ್ಚಿಮ ಏಷ್ಯಾ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ, ಗಲ್ಫ್ ಆಫ್ ಒಮಾನ್ ಸಮುದ್ರ ವಲಯದಲ್ಲಿ ಸಂಚರಿಸುತ್ತಿದ್ದ ವಾಣಿಜ್ಯ ಸರಕು ಸಾಗಣೆ ಹಡಗೊಂದರ ಮೇಲೆ ಅಮೆರಿಕದ ಮಿಲಿಟರಿ ಪಡೆಗಳು ಭಾರಿ ದಾಳಿ ನಡೆಸಿದ್ದವು. ಈ ಭೀಕರ ದಾಳಿಯಲ್ಲಿ ಹಡಗಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮೂವರು ಭಾರತೀಯ ನಾವಿಕರು ಜೀವ ಕಳೆದುಕೊಂಡಿದ್ದರು. ಈ ಘಟನೆಯು ಭಾರತ ಮತ್ತು ಅಮೆರಿಕ ನಡುವಿನ ರಾಜತಾಂತ್ರಿಕ ವಲಯದಲ್ಲಿ ತೀವ್ರ ಸಂಚಲನ ಮೂಡಿಸಿತ್ತು ಹಾಗೂ ಭಾರತ ಸರ್ಕಾರ ಇವರ ಸುರಕ್ಷತೆಯ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿತ್ತು.

ಇದನ್ನೂ ಓದಿ: ಎಲ್ಲಾ ನಾವಿಕರು ಸೇಫ್; ಒಮಾನ್ ಬಳಿ ಮತ್ತೊಂದು ಭಾರತೀಯ ಹಡಗಿನ ಮೇಲೆ ದಾಳಿ ಸುಳ್ಳೆಂದ ಭಾರತ

ವಿದೇಶಾಂಗ ವ್ಯವಹಾರಗಳ ಸಚಿವಾಲಯದ ನಿರಂತರ ಪ್ರಯತ್ನ ಹಾಗೂ ರಾಜತಾಂತ್ರಿಕ ಪ್ರಕ್ರಿಯೆಗಳ ನಂತರ, ಸಾವನ್ನಪ್ಪಿದ ಇಬ್ಬರು ನಾವಿಕರ ಪಾರ್ಥಿವ ಶರೀರಗಳನ್ನು ವಿಶೇಷ ವಿಮಾನದ ಮೂಲಕ ಭಾರತಕ್ಕೆ ಯಶಸ್ವಿಯಾಗಿ ತರಲಾಗಿದೆ. ವಿಮಾನ ನಿಲ್ದಾಣಕ್ಕೆ ಶವಗಳು ತಲುಪುತ್ತಿದ್ದಂತೆ ಮೃತರ ಕುಟುಂಬಸ್ಥರು ಮತ್ತು ಸಂಬಂಧಿಕರ ಆಕ್ರಂದನ ಮುಗಿಲುಮುಟ್ಟಿತ್ತು. ವಿಮಾನ ನಿಲ್ದಾಣದಲ್ಲಿ ಸರ್ಕಾರದ ಹಿರಿಯ ಅಧಿಕಾರಿಗಳು ಮೃತರ ದೇಹಗಳನ್ನು ಸ್ವೀಕರಿಸಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ನಂತರ ಪಾರ್ಥಿವ ಶರೀರಗಳನ್ನು ಅವರವರ ಸ್ವಗ್ರಾಮಗಳಿಗೆ ಸಕಲ ಗೌರವಗಳೊಂದಿಗೆ ಅಂತಿಮ ಸಂಸ್ಕಾರಕ್ಕಾಗಿ ರವಾನಿಸಲಾಗಿದೆ. ಮೂರನೇ ನಾವಿಕನ ಶವವನ್ನು ತರಲು ಕಾನೂನು ಪ್ರಕ್ರಿಯೆಗಳು ಮುಂದುವರಿದಿವೆ ಎನ್ನಲಾಗಿದೆ.

ಇದನ್ನೂ ಓದಿ: ಭಾರತದ ಮೇಲೆ ದಾಳಿಯಾದರೆ ಅಮೆರಿಕ ರಕ್ಷಣೆಗೆ ಧಾವಿಸುತ್ತದೆ; ಮೋದಿಗೆ ಟ್ರಂಪ್ ಭರವಸೆ

“ಎಂಟಿ ಸೆಟೆಬೆಲೊ ಮೇಲಿನ ದಾಳಿಯಲ್ಲಿ ದುರಂತವಾಗಿ ಪ್ರಾಣ ಕಳೆದುಕೊಂಡ ಆದಿತ್ಯ ಶರ್ಮಾ ಮತ್ತು ಶಿವಾನಂದ್ ಚೌರಾಸಿಯಾ ಅವರ ಮೃತದೇಹಗಳನ್ನು ಭಾರತಕ್ಕೆ ತರಲಾಗಿದೆ. ಈ ಕಷ್ಟದ ಸಮಯದಲ್ಲಿ ಅವರ ಕುಟುಂಬಗಳಿಗೆ ನಮ್ಮ ಆಳವಾದ ಸಂತಾಪಗಳು” ಎಂದು ಒಮಾನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ತಿಳಿಸಿದೆ.

ಫ್ರಾನ್ಸ್‌ನ ಎವಿಯಾನ್‌ನಲ್ಲಿ ನಡೆದ ಜಿ7 (G7) ಶೃಂಗಸಭೆಯ ದ್ವಿಪಕ್ಷೀಯ ಮಾತುಕತೆಯ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಮುಂದೆ ಈ ನಾವಿಕರ ಸಾವಿನ ವಿಷಯವನ್ನು ಅತ್ಯಂತ ಗಂಭೀರವಾಗಿ ಪ್ರಸ್ತಾಪಿಸಿದ್ದರು. ಜಾಗತಿಕ ಸಮುದ್ರ ಮಾರ್ಗಗಳಲ್ಲಿ ಲಕ್ಷಾಂತರ ಭಾರತೀಯ ನಾವಿಕರು ಕೆಲಸ ಮಾಡುತ್ತಿದ್ದು, ಅವರ ಸುರಕ್ಷತೆಗೆ ಮೊದಲ ಆದ್ಯತೆ ನೀಡಬೇಕು ಮತ್ತು ಮುಂಬರುವ ಒಪ್ಪಂದಗಳಲ್ಲಿ ಇವರ ರಕ್ಷಣೆಯನ್ನು ಖಚಿತಪಡಿಸಬೇಕು ಎಂದು ಮೋದಿ ಒತ್ತಾಯಿಸಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *