ಒಮಾನ್, ಜೂನ್ 11:ಹಾರ್ಮುಜ್ ಜಲಸಂಧಿ(Hormuz Strait)ಯ ಬಳಿ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯಲ್ಲಿ 3 ಭಾರತೀಯ ನಾವಿಕರು ಸಾವನ್ನಪ್ಪಿದ್ದಾರೆ ಎಂದು ದೃಢಪಟ್ಟಿದೆ. ಒಮಾನ್ ಕೊಲ್ಲಿಯಲ್ಲಿ ಪಲಾವ್ ಧ್ವಜದ ‘ಎಂ/ಟಿ ಸೆಟ್ಟೆಬೆಲ್ಲೊ’ (MT Settebello) ವಾಣಿಜ್ಯ ತೈಲ ಹಡಗಿನ ಮೇಲೆ ನಡೆದ ದಾಳಿಯ ಬಿಕ್ಕಟ್ಟಿನ ನಡುವೆಯೂ, ಅದರಲ್ಲಿದ್ದ ಬಹುತೇಕ ಭಾರತೀಯ ನಾವಿಕರನ್ನು ಸುರಕ್ಷಿತವಾಗಿ ರಕ್ಷಿಸುವಲ್ಲಿ ಭಾರತ ಯಶಸ್ವಿಯಾಗಿದೆ. ತನ್ನ ನಾಗರಿಕರ ಹಿತರಕ್ಷಣೆಗೆ ಭಾರತ ಸರ್ಕಾರವು ಗರಿಷ್ಠ ಆದ್ಯತೆ ನೀಡಿದ್ದು, ಅಮೆರಿಕ ಸರ್ಕಾರದ ವಿರುದ್ಧ ಕಠಿಣ ರಾಜತಾಂತ್ರಿಕ ಕ್ರಮಗಳನ್ನು ಕೈಗೊಂಡಿದೆ.
21 ಭಾರತೀಯ ಸಿಬ್ಬಂದಿಗಳ ಯಶಸ್ವಿ ರಕ್ಷಣೆ
ಹಡಗಿನ ಮೇಲೆ ದಾಳಿ ನಡೆದ ತಕ್ಷಣವೇ ಕೈಗೊಳ್ಳಲಾದ ತುರ್ತು ರಕ್ಷಣಾ ಕಾರ್ಯಾಚರಣೆಯು ದೊಡ್ಡ ಯಶಸ್ಸು ಕಂಡಿದೆ. ಹಡಗಿನಲ್ಲಿದ್ದ ಒಟ್ಟು 24 ಭಾರತೀಯ ಸಿಬ್ಬಂದಿಗಳ ಪೈಕಿ 21 ಭಾರತೀಯರನ್ನು ಅತ್ಯಂತ ಸುರಕ್ಷಿತವಾಗಿ ರಕ್ಷಿಸಿ ದಡಕ್ಕೆ ಕರೆತರಲಾಗಿದೆ.ಆದಾಗ್ಯೂ, ಈ ದಾಳಿಯಲ್ಲಿ ನಾಪತ್ತೆಯಾಗಿದ್ದ ಉಳಿದ ಮೂವರು ಭಾರತೀಯ ನಾವಿಕರು ದುರದೃಷ್ಟವಶಾತ್ ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಹಡಗು ಸಚಿವ ಸರ್ಬಾನಂದ ಸೋನೊವಾಲ್ ಅವರು ಖಚಿತಪಡಿಸಿದ್ದಾರೆ. ಮೃತ ನಾವಿಕರ ಕುಟುಂಬಗಳಿಗೆ ಸರ್ಕಾರವು ಎಲ್ಲಾ ರೀತಿಯ ಬೆಂಬಲವನ್ನು ಘೋಷಿಸಿದೆ.
ವಿಡಿಯೋ
“Jaldi neeche aao. Aag aa gayi” (Come down quickly. The fire is here)
Indian sailors shouting in panic after US Navy strikes hit their ship pic.twitter.com/IcJW4MPdQa
— Shashank Mattoo (@MattooShashank) June 11, 2026
ತನ್ನ ನಾಗರಿಕರ ಮೇಲಿನ ದಾಳಿಯನ್ನು ಭಾರತ ಸರ್ಕಾರವು ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ವಿದೇಶಾಂಗ ವ್ಯವಹಾರಗಳ ಸಚಿವಾಲಯವು (MEA) ಅಮೆರಿಕದ ವಿರುದ್ಧ ತಕ್ಷಣವೇ ಕಠಿಣ ರಾಜತಾಂತ್ರಿಕ ಹೆಜ್ಜೆ ಇಟ್ಟಿದೆ. ವಿದೇಶಾಂಗ ಸಚಿವಾಲಯದ ಹೆಚ್ಚುವರಿ ಕಾರ್ಯದರ್ಶಿ (ಅಮೆರಿಕ) ನಾಗರಾಜ್ ನಾಯ್ಡು ಅವರು ಭಾರತದಲ್ಲಿನ ಅಮೆರಿಕದ ಪ್ರಭಾರ ರಾಯಭಾರಿ ಅಧಿಕಾರಿ ಜೇಸನ್ ಮೀಕ್ಸ್ ಅವರಿಗೆ ತಕ್ಷಣವೇ ಸಮನ್ಸ್ ಜಾರಿಗೊಳಿಸಿ ಕಚೇರಿಗೆ ಕರೆಸಿದ್ದಾರೆ.
ಮತ್ತಷ್ಟು ಓದಿ: ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ನ ಹಲವು ಪ್ರದೇಶಗಳ ಮೇಲೆ ಮತ್ತೆ ಅಮೆರಿಕ ದಾಳಿ, ಹಾರ್ಮುಜ್ ಜಲಸಂಧಿ ಮತ್ತೆ ಬಂದ್
ಇರಾನ್ ವಿರುದ್ಧದ ಕಡಲ ದಿಗ್ಬಂಧನದ ಭಾಗವಾಗಿ ಜೂನ್ 9ರಂದು ರಾತ್ರಿ 11.14ಕ್ಕೆ ಈ ಕಾರ್ಯಾಚರಣೆ ನಡೆಸಿದ್ದಾಗಿ ಯುಎಸ್ ಸೆಂಟ್ರಲ್ ಕಮಾಂಡ್ (CENTCOM) ಅಧಿಕೃತವಾಗಿ ದೃಢಪಡಿಸಿದೆ. ಅಮೆರಿಕದ ಮಿಲಿಟರಿ ಹೇಳಿಕೆಯ ಪ್ರಕಾರ, ಈ ಟ್ಯಾಂಕರ್ ಇರಾನ್ನಿಂದ ತೈಲವನ್ನು ಸಾಗಿಸುತ್ತಿತ್ತು. ಅಮೆರಿಕದ ಪಡೆಗಳು ನೀಡಿದ ಸುರಕ್ಷತಾ ಸೂಚನೆಗಳನ್ನು ಮತ್ತು ನಿಲ್ಲುವ ಆದೇಶಗಳನ್ನು ಹಡಗಿನ ಸಿಬ್ಬಂದಿ ಪದೇ ಪದೇ ಪಾಲಿಸಲು ವಿಫಲವಾದ ಕಾರಣ, ಅಮೆರಿಕದ ಯುದ್ಧ ವಿಮಾನವು ಹಡಗನ್ನು ನಿಷ್ಕ್ರಿಯಗೊಳಿಸಲು ದಾಳಿ ನಡೆಸಿದ್ದಾಗಿ ತಿಳಿಸಿದೆ.
ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
