ಬೆಂಗಳೂರು, (ಏಪ್ರಿಲ್ 24): ಒಳ ಮೀಸಲಾತಿ (Internal Reservation) ಗೊಂದಲಕ್ಕೆ ಕೊನೆಗೂ ರಾಜ್ಯ ಸರ್ಕಾರ ತೆರೆ ಎಳೆದಿದೆ. ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಶುಕ್ರವಾರ ನಡೆದ ವಿಶೇಷ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಮಹತ್ವದ ತೀರ್ಮಾನ ಕೈಗೊಂಡಿದೆ. ಶೇ.15 ಮೀಸಲಾತಿಯಲ್ಲೇ ವರ್ಗೀಕರಣಕ್ಕೆ ಸರ್ಕಾರ ತೀರ್ಮಾನ ಮಾಡಿದ್ದು, ಅದರಂತೆ ಎಡಗೈ ಸಮುದಾಯ ಶೇ. 5.25, ಬಲಗೈ ಸಮುದಾಯ ಶೇ. 5.25 ಹಾಗೂ ಇತರ ಪರಿಶಿಷ್ಟ ಜಾತಿಗಳಿಗೆ ಶೇ. 4.5 ಒಳ ಮೀಸಲಾತಿ ಹಂಚಿಕೆ ಮಾಡಲು ಸರ್ಕಾರ ನಿರ್ಧರಿಸಿದೆ. ಇನ್ನು ಈ ಬಗ್ಗೆ ಸಿಎಂ ಸಿದ್ದರಾಮಯ್ಯ ವಿವರವಾಗಿ ಹೇಳಿದ್ದಾರೆ ನೋಡಿ.