ಕಂಗಾಲಾಗಿ ಓಡಿದ ಜನ, ಕುಟುಂಬಸ್ಥರ ಕೂಗಾಟ; ಬಾಂಗ್ಲಾದಲ್ಲಿ ಬಸ್ ನದಿಗೆ ಬಿದ್ದಿದ್ದು ಹೇಗೆ?

ಕಂಗಾಲಾಗಿ ಓಡಿದ ಜನ, ಕುಟುಂಬಸ್ಥರ ಕೂಗಾಟ; ಬಾಂಗ್ಲಾದಲ್ಲಿ ಬಸ್ ನದಿಗೆ ಬಿದ್ದಿದ್ದು ಹೇಗೆ?

ಢಾಕಾ, ಮಾರ್ಚ್ 26: ನಿನ್ನೆ ಸಂಜೆ ಬಾಂಗ್ಲಾದೇಶದಲ್ಲಿ (Bangladesh Bus Accident) ಅತಿ ಭೀಕರ ಅಪಘಾತ ಸಂಭವಿಸಿದೆ. ಬಾಂಗ್ಲಾದೇಶದ ರಾಜ್ಪರಿಯಲ್ಲಿ ಒಂದು ದಡದಿಂದ ಮತ್ತೊಂದು ದಡಕ್ಕೆ ಸಾರಿಗೆ ದೋಣಿಯ ಮೂಲಕ ಬಸ್​​ನಲ್ಲಿ ಜನರು ಸಂಚರಿಸುತ್ತಾರೆ. ಇದೇ ರೀತಿ ದೋಣಿಯಲ್ಲಿದ್ದ ಖಾಸಗಿ ಬಸ್​ ಇದ್ದಕ್ಕಿದ್ದಂತೆ ಪದ್ಮಾ ನದಿಗೆ ಉರುಳಿದೆ. ಬಸ್​ನಿಂದ ಹೊರಗಿದ್ದ ಕೆಲವು ಕುಟುಂಬಸ್ಥರು ನೋಡುತ್ತಿದ್ದಂತೆ ಬಸ್​ನೊಳಗಿದ್ದ ಅವರ ಫ್ಯಾಮಿಲಿಯವರು ನೀರಿನಲ್ಲಿ ಮುಳುಗಿದ್ದಾರೆ. ದೋಣಿಯ ಮೇಲೆ ನಿಂತು ಮಕ್ಕಳು, ಕುಟುಂಬಸ್ಥರು ಜೋರಾಗಿ ಕಿರುಚಾಡುತ್ತಾ, ತಮ್ಮ ಮನೆಯವರನ್ನು ಕಾಪಾಡಿ ಎಂದು ಗೋಗರೆಯುತ್ತಿರುವ ವಿಡಿಯೋ ಇಲ್ಲಿದೆ. ಈ ಅಪಘಾತದಲ್ಲಿ 23 ಜನರು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಇನ್ನೂ ಹಲವರು ನೀರಿನಲ್ಲಿ ಮುಳುಗಿ ನಾಪತ್ತೆಯಾಗಿದ್ದಾರೆ. ಅವರಿಗಾಗಿ ಶೋಧ ಕಾರ್ಯಾಚರಣೆ ಮುಂದುವರೆದಿರುವುದರಿಂದ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Source link

Leave a Reply

Your email address will not be published. Required fields are marked *