ಬೆಂಗಳೂರು, ಜನವರಿ 10: ಕನ್ನಡಪರ ಮಾತನಾಡಿ ಕೋಗಿಲು ಆಗು, ಇಲ್ಲದಿದ್ದರೆ ಕಾಗೆ ಆಗ್ತೀಯಾ ಎಂದು ಕಾಂಗ್ರೆಸ್ ನಾಯಕ ಕೆ.ಸಿ.ವೇಣುಗೋಪಾಲ್ಗೆ ವಿಪಕ್ಷ ನಾಯಕ ಆರ್.ಅಶೋಕ್ ಟಾಂಗ್ ನೀಡಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೆ.ಸಿ.ವೇಣುಗೋಪಾಲ್ ಕೋಗಿಲು ಕೂಗಿದ ತಕ್ಷಣ ಇಲ್ಲಿ ಎಲ್ಲ ದಾಖಲೆಗಳು ಚೇಂಜ್ ಆದವು. ಆದರೆ, ಕೇರಳದಲ್ಲಿ ಕನ್ನಡ ಬಂದಾಗ ಆ ಕೋಗಿಲೆ ಕೂಗಲೇ ಇಲ್ಲ. ದೆಹಲಿಯಲ್ಲೇ ಸ್ಟ್ರಕ್ ಆಗೋಗಿದೆ, ಇವಾಗ ಕೂಗಪ್ಪ. ನೀನು ಕಾಗೆನೋ ಕೋಗಿಲೆನೋ ಅಂತಾ ಗೊತ್ತಾಗಬೇಕು. ಕನ್ನಡಿಗರಿಗೆ ದ್ರೋಹ ಎಸಗಿದರೆ ನೀನು ಕಾಗೇನೆ ಆಗ್ತೀಯಾ ಎಂದು ವಾಗ್ದಾಳಿ ಮಾಡಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓಡಲು ಇಲ್ಲಿ ಕ್ಲಿಕ್ ಮಾಡಿ.
