ಬೆಂಗಳೂರು, ಜುಲೈ 16: ಕರ್ನಾಟಕದಲ್ಲಿನ ಭೀಕರ ಬರಗಾಲದ ಪರಿಸ್ಥಿತಿ ಕುರಿತು ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ್ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದು, ತಕ್ಷಣದ ಪರಿಹಾರ ಮತ್ತು ಆರ್ಥಿಕ ನೆರವಿಗೆ ಮನವಿ ಮಾಡಿದ್ದಾರೆ. ಮೋದಿಗೆ ಮುಖ್ಯಮಂತ್ರಿಗಳ ಮನವಿಯ ಬೆನ್ನಲ್ಲೇ, ಡಿಸಿಎಂ ಪರಮೇಶ್ವರ್ ಅವರು ರಾಜ್ಯಕ್ಕೆ ವಿಶೇಷ ಅನುದಾನ ಮತ್ತು ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿ (NDRF) ಅಡಿಯಲ್ಲಿ ಮುಂಗಡ ಪರಿಹಾರ ಬಿಡುಗಡೆ ಮಾಡುವಂತೆ ಒತ್ತಾಯಿಸಿದ್ದಾರೆ. ಈ ಸಂಬಂಧ ಕೇಂದ್ರ ಗೃಹ ಸಚಿವರು ಮತ್ತು ಕೃಷಿ ಸಚಿವರಿಗೂ ಪತ್ರ ಬರೆದಿರುವುದಾಗಿ ಅವರು ತಿಳಿಸಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.